ಇಂದು ಬೆಂಗಳೂರಿನ ನಗರ ಪೊಲೀಸ್ ವತಿಯಿಂದ ತಂಬಾಕು ನಿಯಂತ್ರಣದ ಉನ್ನತ ಸಮಿತಿ, ಕರ್ನಾಟಕ ಸರ್ಕಾರ ಮತ್ತು ಯಂಗ್ ಇಂಡಿಯನ್ಸ್ ಅವರ ಸಹಯೋಗದಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಬೃಹತ್ ಜಾಗೃತಿ ಕಾರ್ಯಕ್ರಮವನ್ನು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಗಿತ್ತು.  ಇದನ್ನೂ ಓದಿ : ವಿಧಾನಸೌಧದ‌ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ‌‌ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ
ಈ ಕಾರ್ಯಕ್ರಮಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ, ಐಪಿಎಸ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಖ್ಯಾತ ಸಾರ್ವಜನಿಕ ಆರೋಗ್ಯ ತಜ್ಞರಿಂದ ಉಪನ್ಯಾಸಗಳು ನಡೆದವು. ಈ ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ 1,000 ರೂ. ದಂಡ: ರಾಜ್ಯ ಸರ್ಕಾರದಿಂದ ಅಧಿಸೂಚನೆ
ಕಾರ್ಯಕ್ರಮದಲ್ಲಿ Kick Ash ಅಭಿಯಾನ ಮತ್ತು ಅದರ ಅಧಿಕೃತ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು.
ನಂತರ 50 ವಿದ್ಯಾರ್ಥಿಗಳೊಂದಿಗೆ ಉತ್ಸಾಹಭರಿತ ಪ್ರಶ್ನೋತ್ತರ ಕಾರ್ಯರ್ಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಡೆದ ಚರ್ಚೆಗಳು ತಂಬಾಕು ಸೇವನೆ ಮತ್ತು ವೇಪ್ ಗಳ ಬಳಕೆಯಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಬೆಳಕು ಚೆಲ್ಲಿದವು. ಇದರೊಂದಿಗೆ ಸಾರ್ವಜನಿಕ ಆರೋಗ್ಯ ಜಾಗೃತಿಯ ಮೂಲಕ ತಂಬಾಕು ವ್ಯಸನ ಮುಕ್ತ ಭವಿಷ್ಯದ ಕಡೆಗೆ ಜವಾಬ್ದಾರಿಯುತ ಹಾಗೂ ಧೃಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯತೆಯನ್ನು ತಿಳಿಸಲಾಯಿತು