ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯಕ್ಕೆ ಸಿ.ಎಂ. ಸಿದ್ಧರಾಮಯ್ಯ ಚಾಲನೆ  ನೀಡಿದರು.

ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯ

ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರ ರಚನೆ ಮಾಡಿದೆ. ಚಾಲುಕ್ಯರ ಕಾಲದಲ್ಲಿ ದೇವಸ್ಥಾನ, ಕೋಟೆಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ. ಇದನ್ನೂ ಓದಿ :ಕ್ಲಾಸ್‌ರೂಮ್‌ನಲ್ಲೇ ಅಪ್ರಾಪ್ತ ವಿದ್ಯಾರ್ಥಿ ಜೊತೆ ಸೆಕ್ಸ್‌ – ಶಿಕ್ಷಕಿ ಬಂಧನ

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ. ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು. ಇದರಿಂದ ಇತಿಹಾಸದ ಬಗ್ಗೆ ಜ್ಞಾನ ಮತ್ತು ನಾಡಿನ ಬಗ್ಗೆ ಹೆಮ್ಮೆಯ ಭಾವನೆ ಬೆಳೆಸಿಕೊಳ್ಳಲು ನೆರವಾಗಲಿದೆ. ಇದನ್ನೂ ಓದಿ :ಟೆಕ್ನೋಡಿಯಾ-2024′ ರಾಷ್ಟ್ರೀಯ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಮಾದರಿ ಪ್ರದರ್ಶನ ಹಾಗೂ ಸ್ಪರ್ಧೆ ಕಾರ್ಯಕ್ರಮ
ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.