ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ರಂಗ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗೆ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ – ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ ಎಂದು ಸಿ.ಎಂ.ಸಿದ್ಧರಾಮಯ್ಯ ಹೇಳಿದರು.
ಅವರು ತುಮಕೂರಿನಲ್ಲಿ ಇಂದು  ಸಹಕಾರ ಸಚಿವರು ಆದ ಕೆ.ಎನ್.ರಾಜಣ್ಣನವರ 75ನೇ ಜನ್ಮದಿನದ ಅಂಗವಾಗಿ  ಆಯೋಜಿಸಿದ್ದ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು, ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.  ಇದನ್ನೂ ಓದಿ : ಕೊಡವ ಸಮಾಜದ ಮುಖಂಡರಿಂದ ಸಿ.ಎಂ.ಸಿದ್ಧರಾಮಯ್ಯ ಅವರಿಗೆ ಸಮ್ಮಾನ
ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರೂ ಮುಖ್ಯ ವಾಹಿನಿಗೆ ತರಬೇಕು ಎನ್ನುವುದೇ ರಾಜಕೀಯ ನೈಜ ಗುರಿ. ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ ತರಲು ಸಾಧ್ಯವಾಗುತ್ತದೆ.
ರೈತರು ಸಾಲ ಮನ್ನಾ ಮಾಡಬೇಕೆಂದು ಒತ್ತಡ ತಂದಿದ್ದ ಸಂದರ್ಭದಲ್ಲಿ 50,000 ರೂ.ಗಳ ವರೆಗೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕುಗಳಲ್ಲಿ ರೈತರ ಸಾಲದ ಸಂಪೂರ್ಣ ವಿವರಗಳನ್ನು ನೀಡಿದವರು ರಾಜಣ್ಣ. ಅವರಿಲ್ಲದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು.
ರಾಜಕೀಯದಲ್ಲಿ ಸೋಲು ಗೆಲವು ಸಾಮಾನ್ಯ. ನಾನೂ ಕೂಡ ನಾಲ್ಕು ಬಾರಿ ಸೋತು, ಒಂಭತ್ತು ಬಾರಿ ಗೆದ್ದಿದ್ದೇನೆ. ಸೋತರೂ ಗೆದ್ದರೂ ಬದ್ಧತೆಯಿರುವ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ವಿಚಲಿತರಾಗಬಾರದು. ಇದನ್ನು ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಹುಟ್ಟು ಸಾವಿನ ನಡುವೆ ಬದುಕಿನ ಸಾರ್ಥಕಗೊಳಿಸಿಕೊಳ್ಳಬೇಕು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ರಾಮಲಿಂಗರೆಡ್ಡಿ, ಹೆಚ್.ಸಿ.ಮಹಾದೇವಪ್ಪ, ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಸಚಿವರಾದ ಹೆಚ್.ಆಂಜನೇಯ, ಮುರುಗೇಶ್ ನಿರಾಣಿ, ವೆಂಕಟರಮಣಪ್ಪ ಹಾಗೂ ಹಾಲಿ ಸಂಸದರು, ಶಾಸಕರುಗಳು ಮುಂತಾದವರು ಭಾಗವಹಿಸಿದ್ದರು.
May be an image of ‎3 people and ‎text that says "‎SCURITY ECURITY ה-מי ಶ್ರೀ ಬರಗೂರು ಶ್ರೀಬರಗೂರುರಾಮ ರಾಮುತ มีอรำ 神小1电 ರ್‎"‎‎