ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Posted by Bantwala Isiri News | Jul 19, 2025 | ಬಂಟ್ವಾಳ | 0 |

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ

ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

Share:

Rate:

Previousಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
Nextಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಮಂತ್ರಿ

ಡಾ. ಎಂ.ಎಸ್. ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ : ಪ್ರಧಾನಮಂತ್ರಿ

9 February 2024

ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ

ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ

20 June 2025

ನರಿಕೊಂಬು: ಕೊಪ್ಪಲಕೋಡಿ ಶ್ರೀ ಗುರು ಗೆಳೆಯರ ಬಳಗದ  ಅಧ್ಯಕ್ಷರಾಗಿ ಸೀತಾರಾಮ್ ಸುವರ್ಣ ದೋಟ ಆಯ್ಕೆ

ನರಿಕೊಂಬು: ಕೊಪ್ಪಲಕೋಡಿ ಶ್ರೀ ಗುರು ಗೆಳೆಯರ ಬಳಗದ  ಅಧ್ಯಕ್ಷರಾಗಿ ಸೀತಾರಾಮ್ ಸುವರ್ಣ ದೋಟ ಆಯ್ಕೆ

10 February 2025

ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್‌ ಫೋಟೋ ಹಂಚಿಕೊಂಡ ಮೇಘನಾ

ಪ್ರತಿ ಜನ್ಮಕೂ ನೀನೇ ಬೇಕು – ಚಿರು ಜೊತೆಗಿನ ಸ್ಪೆಷಲ್‌ ಫೋಟೋ ಹಂಚಿಕೊಂಡ ಮೇಘನಾ

30 April 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ
    ಪಾಟ್ನಾ ಪಕ್ಷಿಧಾಮ ಮತ್ತು ಛಾರಿ-ಧಂಡ್ ನಲ್ಲಿ ಹೊಸ ರಾಮ್ಸರ್ ತಾಣಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿ
  • ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ
    ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ
  • ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು – ಭುವನೇಶ್ ಪಚ್ಚಿನಡ್ಕ
    ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು – ಭುವನೇಶ್ ಪಚ್ಚಿನಡ್ಕ
  • ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
    ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
  • ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ನಡೆದ 77ನೇ ಸಂಭ್ರಮದ ಗಣರಾಜ್ಯೋತ್ಸವ
    ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ನಡೆದ 77ನೇ ಸಂಭ್ರಮದ ಗಣರಾಜ್ಯೋತ್ಸವ
  • ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಬಂಟ್ವಾಳ : ಗಣರಾಜ್ಯೋತ್ಸವ ಆಚರಣೆ
    ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಬಂಟ್ವಾಳ : ಗಣರಾಜ್ಯೋತ್ಸವ ಆಚರಣೆ
  • ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ
    ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ
  • ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
    ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
  • ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
    ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
  • ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರ
    ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರ

Designed by Elegant Themes | Powered by WordPress

error: Content is protected !!