ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಮಂಗಳೂರು : ಕದ್ರಿ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕ

Posted by Bantwala Isiri News | Nov 5, 2025 | ಬಂಟ್ವಾಳ | 0 |

ಮಂಗಳೂರು : ಕದ್ರಿ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕ

ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ (Smart City) ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ (Toll) ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಇದನ್ನೂ ಓದಿ :ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

ಕದ್ರಿ ಪಾರ್ಕ್  ಕಡಲ ತಡಿ ಮಂಗಳೂರಿನ ಯುವಕ ಯುವತಿಯರ ಫೇವರೆಟ್ ಸ್ಪಾಟ್. ವಾಯು ವಿಹಾರಿಗಳ ನೆಚ್ಚಿನ ತಾಟ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೋಟ್ಯಂತರ ವೆಚ್ಚದಲ್ಲಿ ಅಭಿವೃದ್ಧಿಗೊಂಡು ಕದ್ರಿ ಪಾರ್ಕ್ ನಳನಳಿಸುತ್ತಿದೆ. ಪ್ರತಿನಿತ್ಯ ಸಾವಿರಾರು ಮಂದಿ, ಕದ್ರಿ ಪಾರ್ಕ್ಗೆ ಬರುತ್ತಾರೆ. ಆದ್ರೆ ಜನವರಿಯಿಂದ ಕದ್ರಿ ಪಾರ್ಕ್ಗೆ ಬರುವವರಿಗೆ ಟೋಲ್ ರೀತಿಯಲ್ಲೇ ಹಣ ಕಟ್ ಆಗುವ ಬಿಸಿ ತಟ್ಟಲಿದೆ.

ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆ ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್ನ ಅಂಗಡಿ, ರಸ್ತೆ ಫುಟ್‌ಪಾತ್, ಪಾರ್ಕಿಂಗ್ ಜಾಗವನ್ನು ನಿರ್ವಹಣೆ ಮಾಡಲಿದೆ. ಆದರೆ ಟೆಂಡರ್ ಪಡೆದ ಸಂಸ್ಥೆಗೆ ಇದರಿಂದ ನಿರೀಕ್ಷಿತ ಪ್ರಮಾಣದ ಆದಾಯ ಸಿಗುತ್ತಿಲ್ಲ. ಹೀಗಾಗಿ ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ಗೇಟ್ ರೀತಿಯಲ್ಲೇ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ವಾಹನದ ನಂಬರ್ ಪ್ಲೇಟ್ ಇಮೇಜ್ ಸೆರೆಹಿಡಿದು ವಾಹನದ ಫಾಸ್ಟ್ ಟ್ಯಾಗ್‌ಗೆ ಲಿಂಕ್ ಮಾಡಲಾಗುತ್ತದೆ. 5 ನಿಮಿಷದ ಒಳಗೆ ತೆರಳಿದ್ರೆ ಯಾವುದೇ ಶುಲ್ಕ ಕಟ್ ಆಗಲ್ಲ. ಹೆಚ್ಚಾದ್ರೆ, 50 ರೂ. ಹಣ ಕಟ್ ಆಗಲಿದೆ.

 ಟೋಲ್ ರೀತಿಯ ಹಣ ಸಂಗ್ರಹಕ್ಕೆ ಮುಂದಾಗಲಿರುವ ಸ್ಮಾರ್ಟ್ ಸಿಟಿ ಕ್ರಮದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಪಾರ್ಕ್ ರಸ್ತೆಗೆ ಟೋಲ್ ರೀತಿಯ ಶುಲ್ಕ ಮಾಡಿದ್ರೆ ಪಾರ್ಕ್ ಜನ ಬರೋದು ಹೇಗೆ? ಇದರಿಂದ ಸುಗಮ ವಾಹನ ಸಂಚಾರಕ್ಕೂ ತೊಡಕಾಗುತ್ತೆ. ಹೀಗಾಗಿ ಯಾವುದೇ ಕಾರಣಕ್ಕೂ ಹೆದ್ದಾರಿಯಂತೆ ಇಲ್ಲಿ ಟೋಲ್ ಬೇಡ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Share:

Rate:

Previousವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
Nextಟೇಕಾಫ್ ಆಗ್ತಿದ್ದತೆ ಆಗಸದಿಂದ ಬೆಂಕಿಯುಂಡೆಯಾಗಿ ಅಪ್ಪಳಿಸಿ ಪಲ್ಟಿಯಾದ ವಿಮಾನ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ  ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

16 July 2024

ಹೈದರಾಬಾದ್:  17 ಮಂದಿ ಸಜೀವ ದಹನ

ಹೈದರಾಬಾದ್: 17 ಮಂದಿ ಸಜೀವ ದಹನ

18 May 2025

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ

25 February 2025

ಬ್ರಹ್ಮಶ್ರೀ ನಾರಾಯಣ ಗುರುಗಳು ಜೀವನದುದ್ದಕ್ಕೂ ಮಾಡಿದ ಪವಿತ್ರ, ಕಳಂಕರಹಿತ ಮಾನವ ಸೇವೆ ಸೀಮಾತೀತವಾದದ್ದು- ಬೇಬಿ ಕುಂದರ್

ಬ್ರಹ್ಮಶ್ರೀ ನಾರಾಯಣ ಗುರುಗಳು ಜೀವನದುದ್ದಕ್ಕೂ ಮಾಡಿದ ಪವಿತ್ರ, ಕಳಂಕರಹಿತ ಮಾನವ ಸೇವೆ ಸೀಮಾತೀತವಾದದ್ದು- ಬೇಬಿ ಕುಂದರ್

7 February 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
    ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
  • ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
    ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌
  • ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
    ಮಧ್ಯಪ್ರಾಚ್ಯ ಬಿಕ್ಕಟ್ಟು – ಭಾರತದಲ್ಲಿ ಇಂಧನ, ತೈಲ ಪೂರೈಕೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿ ಹೈವೋಲ್ಟೇಜ್‌ ಸಭೆ
  • ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
    ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
  • ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
    ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
  • ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
    ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
  • ಪ್ರಧಾನಮಂತ್ರಿ  ಅವರನ್ನು ಭೇಟಿ ಮಾಡಿದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಗಳು
    ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಗಳು
  • ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ
    ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ
  • ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ  ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಬಲಿ
    ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಬಲಿ
  • Home Delivery Death: ಮನೆಯಲ್ಲೇ 7ನೇ ಹೆರಿಗೆ, ತಾಯಿ ಸಾವು! ಅಕ್ಯುಪಂಕ್ಚರ್ ಚಿಕಿತ್ಸಕ ಪತಿ ವಿರುದ್ಧ ಕೇಸ್
    Home Delivery Death: ಮನೆಯಲ್ಲೇ 7ನೇ ಹೆರಿಗೆ, ತಾಯಿ ಸಾವು! ಅಕ್ಯುಪಂಕ್ಚರ್ ಚಿಕಿತ್ಸಕ ಪತಿ ವಿರುದ್ಧ ಕೇಸ್

Designed by Elegant Themes | Powered by WordPress

error: Content is protected !!