ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಮಂಗಳೂರು : ಕದ್ರಿ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕ

Posted by Bantwala Isiri News | Nov 5, 2025 | ಬಂಟ್ವಾಳ | 0 |

ಮಂಗಳೂರು : ಕದ್ರಿ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕ

ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ (Smart City) ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ (Toll) ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಇದನ್ನೂ ಓದಿ :ವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

ಕದ್ರಿ ಪಾರ್ಕ್  ಕಡಲ ತಡಿ ಮಂಗಳೂರಿನ ಯುವಕ ಯುವತಿಯರ ಫೇವರೆಟ್ ಸ್ಪಾಟ್. ವಾಯು ವಿಹಾರಿಗಳ ನೆಚ್ಚಿನ ತಾಟ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೋಟ್ಯಂತರ ವೆಚ್ಚದಲ್ಲಿ ಅಭಿವೃದ್ಧಿಗೊಂಡು ಕದ್ರಿ ಪಾರ್ಕ್ ನಳನಳಿಸುತ್ತಿದೆ. ಪ್ರತಿನಿತ್ಯ ಸಾವಿರಾರು ಮಂದಿ, ಕದ್ರಿ ಪಾರ್ಕ್ಗೆ ಬರುತ್ತಾರೆ. ಆದ್ರೆ ಜನವರಿಯಿಂದ ಕದ್ರಿ ಪಾರ್ಕ್ಗೆ ಬರುವವರಿಗೆ ಟೋಲ್ ರೀತಿಯಲ್ಲೇ ಹಣ ಕಟ್ ಆಗುವ ಬಿಸಿ ತಟ್ಟಲಿದೆ.

ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆ ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್ನ ಅಂಗಡಿ, ರಸ್ತೆ ಫುಟ್‌ಪಾತ್, ಪಾರ್ಕಿಂಗ್ ಜಾಗವನ್ನು ನಿರ್ವಹಣೆ ಮಾಡಲಿದೆ. ಆದರೆ ಟೆಂಡರ್ ಪಡೆದ ಸಂಸ್ಥೆಗೆ ಇದರಿಂದ ನಿರೀಕ್ಷಿತ ಪ್ರಮಾಣದ ಆದಾಯ ಸಿಗುತ್ತಿಲ್ಲ. ಹೀಗಾಗಿ ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ಗೇಟ್ ರೀತಿಯಲ್ಲೇ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ವಾಹನದ ನಂಬರ್ ಪ್ಲೇಟ್ ಇಮೇಜ್ ಸೆರೆಹಿಡಿದು ವಾಹನದ ಫಾಸ್ಟ್ ಟ್ಯಾಗ್‌ಗೆ ಲಿಂಕ್ ಮಾಡಲಾಗುತ್ತದೆ. 5 ನಿಮಿಷದ ಒಳಗೆ ತೆರಳಿದ್ರೆ ಯಾವುದೇ ಶುಲ್ಕ ಕಟ್ ಆಗಲ್ಲ. ಹೆಚ್ಚಾದ್ರೆ, 50 ರೂ. ಹಣ ಕಟ್ ಆಗಲಿದೆ.

 ಟೋಲ್ ರೀತಿಯ ಹಣ ಸಂಗ್ರಹಕ್ಕೆ ಮುಂದಾಗಲಿರುವ ಸ್ಮಾರ್ಟ್ ಸಿಟಿ ಕ್ರಮದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಪಾರ್ಕ್ ರಸ್ತೆಗೆ ಟೋಲ್ ರೀತಿಯ ಶುಲ್ಕ ಮಾಡಿದ್ರೆ ಪಾರ್ಕ್ ಜನ ಬರೋದು ಹೇಗೆ? ಇದರಿಂದ ಸುಗಮ ವಾಹನ ಸಂಚಾರಕ್ಕೂ ತೊಡಕಾಗುತ್ತೆ. ಹೀಗಾಗಿ ಯಾವುದೇ ಕಾರಣಕ್ಕೂ ಹೆದ್ದಾರಿಯಂತೆ ಇಲ್ಲಿ ಟೋಲ್ ಬೇಡ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Share:

Rate:

Previousವೀರಕಂಭ ಗ್ರಾಮ ಪಂಚಾಯತ್ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
Nextಟೇಕಾಫ್ ಆಗ್ತಿದ್ದತೆ ಆಗಸದಿಂದ ಬೆಂಕಿಯುಂಡೆಯಾಗಿ ಅಪ್ಪಳಿಸಿ ಪಲ್ಟಿಯಾದ ವಿಮಾನ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ

ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ

7 January 2026

ಎಸ್.ವಿ.ಎಸ್.  ಆರ್ಮಿವಿಂಗ್ (ಜೆಡಿ/ಜೆಡ್ಲ್ಯೂ) ಎನ್.ಸಿ.ಸಿ. ಘಟಕ ಪ್ರಾರಂಭಿಸಲು ಅನುಮತಿ

ಎಸ್.ವಿ.ಎಸ್. ಆರ್ಮಿವಿಂಗ್ (ಜೆಡಿ/ಜೆಡ್ಲ್ಯೂ) ಎನ್.ಸಿ.ಸಿ. ಘಟಕ ಪ್ರಾರಂಭಿಸಲು ಅನುಮತಿ

2 July 2025

ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ

ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ

23 June 2025

🔱 ಕಾರಿಂಜದ ಆಟಿ ಅಮಾವಾಸ್ಯೆ ಯಾಕೆ ಅತೀ ವಿಶೇಷ ? 🔱

🔱 ಕಾರಿಂಜದ ಆಟಿ ಅಮಾವಾಸ್ಯೆ ಯಾಕೆ ಅತೀ ವಿಶೇಷ ? 🔱

31 July 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್‌ನಲ್ಲೇ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು!
    ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್‌ನಲ್ಲೇ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು!
  • ಪ್ರವೀಣ್ ಪ್ರವೀಣ್ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಅರೆಸ್ಟ್‌
    ಪ್ರವೀಣ್ ಪ್ರವೀಣ್ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಅರೆಸ್ಟ್‌
  • ಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
    ಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
  • ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
    ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
  • ಭಾರೀ ಮಳೆಗೆ  ಮನೆ ಛಾವಣಿ ಕುಸಿತ :  ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
    ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
  • PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
    PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
  • ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
    ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
  • ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
    ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್

Designed by Elegant Themes | Powered by WordPress

error: Content is protected !!