ಬೆಂಗಳೂರು: ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ನ 28ನೇ ಆವೃತ್ತಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಶುಭ ಹಾರೈಸಿದರು.  ಇದನ್ನೂ ಓದಿ :ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.