ಬಂಟ್ವಾಳ: ಸ್ಪರ್ಧೆ ಎನ್ನುವುದು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರುವ ಮಾಧ್ಯಮ. ಪ್ರಶಸ್ತಿಗಳನ್ನು ಗಮನದಲ್ಲಿಟ್ಟುಕೊಳ್ಳದೇ ಎಲ್ಲಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ದೊರಕಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ.ಮಂಚಿ ನುಡಿದರು. ಇದನ್ನೂ ಓದಿ :2028 ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುವುದು ಶತಸಿದ್ಧ -ಸಿ.ಎಂ.ಸಿದ್ದರಾಮಯ್ಯ
ಅವರು ಶ್ರೀ ವೆಂಕಟರಮಣಸ್ವಾಮೀ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳ ಪ್ರಶಸ್ತಿಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಸ್ವಾಗತಿಸಿ, ಬಿ.ಸಿ.ಎ. ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸಹನಾ ವಂದಿಸಿದರು. ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ರಾಲ್ವಿನ್ ಲಾಯ್ಡ್ ರೋಡ್ರಿಗಸ್ ನಿರೂಪಿಸಿದರು. ಡಾ.ವಿನಾಯಕ ಕೆ.ಎಸ್. ಹಾಗೂ ಶ್ರೀಮತಿ ಭವಿತಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಟ್ಟರು.