ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Posted by Bantwala Isiri News | Dec 4, 2025 | ಬಂಟ್ವಾಳ | 0 |

ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌  ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. .

ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ವ್ಯಾಪಕ ವಿಳಂಬ ಮತ್ತು ರದ್ದತಿಯಿಂದಾಗಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ :4 ಡಿಸೆಂಬರ್‌ Indian Navy Day (ಭಾರತೀಯ ನೌಕಾಪಡೆ ದಿನ)

ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ತಾಂತ್ರಿಕ ದೋಷ ಉಂಟಾಗಿರುವ ಪರಿಣಾಮ 73 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ನಿನ್ನೆ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನ ಹಾರಾಟ ರದ್ದುಗೊಳಿಸಿದೆ.

ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ಕಾರಣಗಳನ್ನ ವಿವರಿಸುವಂತೆ ಮತ್ತು ಪರಿಸ್ಥಿತಿ ಸುಧಾರಿಸಲು ಒಂದು ಯೋಜನೆ ನೀಡುವಂತೆ ಡಿಜಿಸಿಎ (DGCA) ಇಂಡಿಗೋಗೆ ಸೂಚಿಸಿದೆ. ಅಲ್ಲದೇ ಈ ಕುರಿತು ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ಬುಲಾವ್‌ ನೀಡಿದೆ.

ಉಂಟಾಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಇಂಡಿಗೋ ಸಂಸ್ಥೆಯು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.

ಸಣ್ಣಪುಟ್ಟ ತಾಂತ್ರಿಕ ದೋಷಗಳು, ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಿಮಾನ ನಿಲ್ದಾಣದಲ್ಲಿನ ದಟ್ಟಣೆ ಹಾಗೂ ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಅನುಷ್ಠಾನ ಸೇರಿದಂತೆ ಅನಿರೀಕ್ಷಿತ ಕಾರ್ಯಾಚರಣೆ ಸವಾಲುಗಳು ಅಡಚಣೆಗೆ ಕಾರಣವಾಗಿದೆ. ಇದನ್ನ ನಾವು ಊಹಿಸಿಯೂ ಇರಲಿಲ್ಲ. ಹಾಗಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ಕಾರ್ಯಾಚರಣೆ ಸ್ಥಿರಗೊಳಿಸಲು ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಆಗಿದೆ ಎಂದು ತಿಳಿಸಿದೆ.

Share:

Rate:

Previous4 ಡಿಸೆಂಬರ್‌ Indian Navy Day (ಭಾರತೀಯ ನೌಕಾಪಡೆ ದಿನ)
Nextವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ಮಹಿಳಾ ನೌಕರರ ಸಮ್ಮೇಳನ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

Bantwala ಕೃಷಿ ಇಲಾಖೆ: ಕೃಷಿ ಹೊಂಡ ನಿರ್ಮಾಣಕ್ಕೆ ರೂ.1.02 ಲಕ್ಷ ಸಹಾಯಧನ

Bantwala ಕೃಷಿ ಇಲಾಖೆ: ಕೃಷಿ ಹೊಂಡ ನಿರ್ಮಾಣಕ್ಕೆ ರೂ.1.02 ಲಕ್ಷ ಸಹಾಯಧನ

25 May 2025

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

28 December 2023

ಅಂಗನವಾಡಿ ನೇಮಕಾತಿ 2024 – Anganwadi Recruitment Karnataka 2024

ಅಂಗನವಾಡಿ ನೇಮಕಾತಿ 2024 – Anganwadi Recruitment Karnataka 2024

24 September 2024

ತುಂಬೆ ಶಾರದಾಂಬ ಸಮುದಾಯ ಭವನಕ್ಕೆ 5 ಲಕ್ಷ ಸಹಾಯಧನ ಮಂಜುರಾತಿ ಪತ್ರ ಹಸ್ತಾಂತರ

ತುಂಬೆ ಶಾರದಾಂಬ ಸಮುದಾಯ ಭವನಕ್ಕೆ 5 ಲಕ್ಷ ಸಹಾಯಧನ ಮಂಜುರಾತಿ ಪತ್ರ ಹಸ್ತಾಂತರ

16 September 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಹರಿಯಾಣ : ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ
    ಹರಿಯಾಣ : ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ
  • ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ
    ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ
  • ಯೆನೆಪೊಯ ( ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 
    ಯೆನೆಪೊಯ ( ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 
  • ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆ ವಿದ್ಯಾಗಿರಿ, ಬಂಟ್ವಾಳ – ಅಂತಾರಾಷ್ಟ್ರೀಯ  ಮಹಿಳಾ ದಿನಾಚರಣೆ
    ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆ ವಿದ್ಯಾಗಿರಿ, ಬಂಟ್ವಾಳ – ಅಂತಾರಾಷ್ಟ್ರೀಯ  ಮಹಿಳಾ ದಿನಾಚರಣೆ
  • ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆ
    ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪೋಷಕರ ವಿಶೇಷ ಸಭೆ
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ 7 ದಿನದ ಉಚಿತ ಮದುಮಗಳ ಶೃಂಗಾರ ತರಬೇತಿ ಶಿಬಿರ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ 7 ದಿನದ ಉಚಿತ ಮದುಮಗಳ ಶೃಂಗಾರ ತರಬೇತಿ ಶಿಬಿರ
  • ದೇವರೆಂಬ ನಂಬಿಕೆಯು ಜಾತಿ-ಧರ್ಮಗಳನ್ನು ಮೀರಿದಂಥದ್ದು  – ಸಿ.ಎಂ.ಸಿದ್ದರಾಮಯ್ಯ
    ದೇವರೆಂಬ ನಂಬಿಕೆಯು ಜಾತಿ-ಧರ್ಮಗಳನ್ನು ಮೀರಿದಂಥದ್ದು – ಸಿ.ಎಂ.ಸಿದ್ದರಾಮಯ್ಯ
  • ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ
    ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ
  • 15ನೇ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳದ ಉದ್ಘಾಟಿಸಿದ – ಸಿ.ಎಂ. ಸಿದ್ದರಾಮಯ್ಯ
    15ನೇ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳದ ಉದ್ಘಾಟಿಸಿದ – ಸಿ.ಎಂ. ಸಿದ್ದರಾಮಯ್ಯ
  • World Hearing Day Observed at Yenepoya Medical College Hospital
    World Hearing Day Observed at Yenepoya Medical College Hospital

Designed by Elegant Themes | Powered by WordPress

error: Content is protected !!