ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Posted by Bantwala Isiri News | Jan 28, 2026 | ಬಂಟ್ವಾಳ | 0 |

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
ಮುಂಬೈ: ವಿಮಾನ ಪತನಗೊಂಡು (Plane Crash) ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ (Ajit Pawar) ಅವರ ಮೃತದೇಹವನ್ನು ವಾಚ್‌ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ. ಇದನ್ನೂ ಓದಿ : ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಬೆಳಗ್ಗೆ ಗೋಚರತೆ ತೀವ್ರವಾಗಿ ಕಡಿಮೆಯಾಗಿತ್ತು. ವಿಮಾನ ಪತನಗೊಂಡ ವಿಚಾರ ತಿಳಿದು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಅಪಘಾತದ ತೀವ್ರತೆಗೆ ಜಿಟ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ವಿಮಾನದ ಅವಶೇಷಗಳಲ್ಲಿ ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಪವಾರ್ ದೇಹವನ್ನು ಅವರ ವಾಚ್‌ ಮತ್ತು ಬಟ್ಟೆಗಳನ್ನು ಆಧರಿಸಿ ಗುರುತಿಸಲಾಯಿತು. ಉಳಿದವರನ್ನು ಬಟ್ಟೆ ಮತ್ತು ಅವರ ಇತರೆ ವಸ್ತುಗಳ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ.
ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ.

 

ಅಜಿತ್‌ ಪವಾರ್‌ ಅವರ ಸಾವು ಮಹಾರಾಷ್ಟ್ರದ ರಾಜಕೀಯ ವ್ಯವಸ್ಥೆಗೆ ದೊಡ್ಡ ಆಘಾತ ನೀಡಿದೆ. 66 ವರ್ಷದ ಪವಾರ್ ಅವರು ರಾಜ್ಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು.

Share:

Rate:

Previousಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
Nextಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ – 78 ನೇ ಸಂಭ್ರಮದ ಸ್ವಾತಂತ್ರೋತ್ಸವ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ – 78 ನೇ ಸಂಭ್ರಮದ ಸ್ವಾತಂತ್ರೋತ್ಸವ

16 August 2024

ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿಗಳು, ಉತ್ತಮ ಆರೋಗ್ಯಕ್ಕೆ ನಾಂದಿಯಾಗಿತ್ತು- ಸುಲೋಚನ ಭಟ್

ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿಗಳು, ಉತ್ತಮ ಆರೋಗ್ಯಕ್ಕೆ ನಾಂದಿಯಾಗಿತ್ತು- ಸುಲೋಚನ ಭಟ್

31 July 2024

ಶರತ್ ಮಡಿವಾಳರ ಪುಣ್ಯಸ್ಮರಣೆ ಹಾಗೂ ನುಡಿನಮನ

ಶರತ್ ಮಡಿವಾಳರ ಪುಣ್ಯಸ್ಮರಣೆ ಹಾಗೂ ನುಡಿನಮನ

7 July 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

27 July 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ – ದರ್ಶನ್‌ಗೆಒಂದು ವಾರ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸದಂತೆ ಕೋರ್ಟ್‌ ಸೂಚನೆ
    ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ – ದರ್ಶನ್‌ಗೆಒಂದು ವಾರ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸದಂತೆ ಕೋರ್ಟ್‌ ಸೂಚನೆ
  • 🌾 ಯುವಜನತೆ ಕೃಷಿಯತ್ತ ಒಲವು ಬೆಳೆಸಿಕೊಳ್ಳಲಿ -ಶಾಸಕ ರಾಜೇಶ್ ನಾಯ್ಕ್
    🌾 ಯುವಜನತೆ ಕೃಷಿಯತ್ತ ಒಲವು ಬೆಳೆಸಿಕೊಳ್ಳಲಿ -ಶಾಸಕ ರಾಜೇಶ್ ನಾಯ್ಕ್
  • ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾದಿಂದ ‘ಆಟಿದ ಗಮ್ಮತ್ತು’ ವಿನೂತನ ಕಾರ್ಯಕ್ರಮ
    ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾದಿಂದ ‘ಆಟಿದ ಗಮ್ಮತ್ತು’ ವಿನೂತನ ಕಾರ್ಯಕ್ರಮ
  • ರೇಣುಕಾಸ್ವಾಮಿ ಒಳ ಉಡುಪನ್ನು ತೆಗೆದು ದರ್ಶನ್‌ ಹೊಡೆದಿದ್ದರು – ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಏನಿದೆ?
    ರೇಣುಕಾಸ್ವಾಮಿ ಒಳ ಉಡುಪನ್ನು ತೆಗೆದು ದರ್ಶನ್‌ ಹೊಡೆದಿದ್ದರು – ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಏನಿದೆ?
  • ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್‌ನಲ್ಲೇ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು!
    ಬರಲು ನಮಗೆ ಸಮಯವಿಲ್ಲ- ವಿಡಿಯೋ ಕಾಲ್‌ನಲ್ಲೇ ತಂದೆಯ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು!
  • ಪ್ರವೀಣ್ ಪ್ರವೀಣ್ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಅರೆಸ್ಟ್‌
    ಪ್ರವೀಣ್ ಪ್ರವೀಣ್ನೆಟ್ಟಾರು ಕೊಲೆ ಕೇಸ್‌- 4 ವರ್ಷದಿಂದ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ಕೊಚ್ಚಿಯಲ್ಲಿ ಅರೆಸ್ಟ್‌
  • ಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
    ಮಹಿಳೆಯರ ಮೆನೋಪಾಸ್ ಸಮಸ್ಯೆಗೆ ರಾಜ್ಯ ಸರ್ಕಾರ ವಿಶೇಷ ನೀತಿ – ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
  • ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
    ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
  • ಭಾರೀ ಮಳೆಗೆ  ಮನೆ ಛಾವಣಿ ಕುಸಿತ :  ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

Designed by Elegant Themes | Powered by WordPress

error: Content is protected !!