ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ

Posted by Bantwala Isiri News | Jan 28, 2026 | ಬಂಟ್ವಾಳ | 0 |

ದಟ್ಟ ಮಂಜಿನಿಂದಾಗಿ ವಿಮಾನ ಪತನ; ವಾಚ್‌, ಬಟ್ಟೆಯಿಂದ ಅಜಿತ್‌ ಪವಾರ್‌ ಗುರುತು ಪತ್ತೆ
ಮುಂಬೈ: ವಿಮಾನ ಪತನಗೊಂಡು (Plane Crash) ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ (Ajit Pawar) ಅವರ ಮೃತದೇಹವನ್ನು ವಾಚ್‌ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ. ಇದನ್ನೂ ಓದಿ : ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ

ಪವಾರ್‌ ಇದ್ದ ವಿಮಾನ ಬುಧವಾರ ಇಳಿಯಲು ಪ್ರಯತ್ನಿಸಿದಾಗ ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆ ಇತ್ತು. ಪೈಲಟ್‌ಗೆ ಸರಿಯಾದ ಗೋಚರತೆ ಇಲ್ಲದೇ ವಿಮಾನ ಪತನವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. VSR ವೆಂಚರ್ಸ್ ನಿರ್ವಹಿಸುತ್ತಿದ್ದ ಬೊಂಬಾರ್ಡಿಯರ್ ಲಿಯರ್ಜೆಟ್-45, ವಿಮಾನ ನಿಲ್ದಾಣದದಲ್ಲಿ ಪತನಗೊಂಡು, ಅದರಲ್ಲಿದ್ದ ಐವರು ಮೃತಪಟ್ಟಿದ್ದಾರೆ.

ಬೆಳಗ್ಗೆ ಗೋಚರತೆ ತೀವ್ರವಾಗಿ ಕಡಿಮೆಯಾಗಿತ್ತು. ವಿಮಾನ ಪತನಗೊಂಡ ವಿಚಾರ ತಿಳಿದು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಅಪಘಾತದ ತೀವ್ರತೆಗೆ ಜಿಟ್‌ ಸಂಪೂರ್ಣ ಸುಟ್ಟು ಕರಕಲಾಗಿತ್ತು.

ವಿಮಾನದ ಅವಶೇಷಗಳಲ್ಲಿ ಮೃತದೇಹಗಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಪವಾರ್ ದೇಹವನ್ನು ಅವರ ವಾಚ್‌ ಮತ್ತು ಬಟ್ಟೆಗಳನ್ನು ಆಧರಿಸಿ ಗುರುತಿಸಲಾಯಿತು. ಉಳಿದವರನ್ನು ಬಟ್ಟೆ ಮತ್ತು ಅವರ ಇತರೆ ವಸ್ತುಗಳ ಆಧಾರದಲ್ಲಿ ಗುರುತು ಪತ್ತೆ ಮಾಡಲಾಗಿದೆ.
ಪವಾರ್ ತಮ್ಮ ವೈಯಕ್ತಿಕ ಭದ್ರತಾ ಅಧಿಕಾರಿ, ಒಬ್ಬ ಸಹಾಯಕ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಪ್ರಯಾಣಿಸುತ್ತಿದ್ದರು. ಐದು ಮಂದಿ ಪ್ರಯಾಣಿಕರಲ್ಲಿ ಯಾರೂ ಬದುಕುಳಿದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತನಿಖೆ ಆರಂಭಿಸಿದೆ. ವಿಮಾನದ ಅಂತಿಮ ಕ್ಷಣಗಳ ಮಾಹಿತಿ ದಾಖಲಿಸಲು ಫ್ಲೈಟ್ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ನಿರ್ಣಾಯಕ ಪಾತ್ರ ವಹಿಸುತ್ತವೆ. ಆ ಸಮಯದಲ್ಲಿ ವಿಮಾನ ನಿಲ್ದಾಣದ ಹವಾಮಾನ ವಿವರಗಳು ಸಹ ಅವುಗಳಲ್ಲಿ ದಾಖಲಾಗಿರುತ್ತವೆ.

 

ಅಜಿತ್‌ ಪವಾರ್‌ ಅವರ ಸಾವು ಮಹಾರಾಷ್ಟ್ರದ ರಾಜಕೀಯ ವ್ಯವಸ್ಥೆಗೆ ದೊಡ್ಡ ಆಘಾತ ನೀಡಿದೆ. 66 ವರ್ಷದ ಪವಾರ್ ಅವರು ರಾಜ್ಯದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಆರನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದರು.

Share:

Rate:

Previousಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
Nextಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡ ಇದರ ನೂತನ ವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ 10 ಲಕ್ಷ ಮೊತ್ತದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ- ಸಿ.ಎಂ.ಸಿದ್ಧರಾಮಯ್ಯ

ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ- ಸಿ.ಎಂ.ಸಿದ್ಧರಾಮಯ್ಯ

16 February 2025

 ಕಲ್ಲಡ್ಕ: ಯಕ್ಷಗಾನ ತರಗತಿ ಉದ್ಘಾಟನೆ

 ಕಲ್ಲಡ್ಕ: ಯಕ್ಷಗಾನ ತರಗತಿ ಉದ್ಘಾಟನೆ

5 July 2025

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

1 December 2024

ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ

ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ

19 February 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ ಹಾಗೂ ಮಾಸಿಕ ಸಭೆ
    ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಮನೆ ದುರಸ್ತಿ ಶ್ರಮದಾನ ಹಾಗೂ ಮಾಸಿಕ ಸಭೆ
  • ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ
    ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬಂಟ್ವಾಳ ಹಾಗೂ ಮಾತೃಭೂಮಿ ಸೇವಾ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಬಡ ಮಹಿಳೆಯ ಮನೆ ದುರಸ್ತಿ ಮಾಡಿ ಹಸ್ತಾಂತರ
  • ವಡೋದರಾಕ್ಕೆ ಹೋಗುವ ದಾರಿಯಲ್ಲಿ ತೆಗೆದ ಸೋಮನಾಥ ದೇವಾಲಯದ ಛಾಯಾಚಿತ್ರವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
    ವಡೋದರಾಕ್ಕೆ ಹೋಗುವ ದಾರಿಯಲ್ಲಿ ತೆಗೆದ ಸೋಮನಾಥ ದೇವಾಲಯದ ಛಾಯಾಚಿತ್ರವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
  • ಹರೀಶ್ ಮಾಂಬಾಡಿ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ
    ಹರೀಶ್ ಮಾಂಬಾಡಿ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ
  • ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ
    ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ನಿಧನ
  • 1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌
    1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ – ಐವರು ಅರೆ‌ಸ್ಟ್‌
  • ತುಮಕೂರು : ಲಾರಿ ಹಾಗೂ ಕಾರು ನಡುವೆ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು
    ತುಮಕೂರು : ಲಾರಿ ಹಾಗೂ ಕಾರು ನಡುವೆ ಅಪಘಾತ ನಾಲ್ವರು ಸ್ಥಳದಲ್ಲೇ ಸಾವು
  • ತಮಿಳುನಾಡು ಸಿಎಂ ಆಗಿ ವಿಜಯ್‌ ನಾಳೆ ಪ್ರಮಾಣವಚನ
    ತಮಿಳುನಾಡು ಸಿಎಂ ಆಗಿ ವಿಜಯ್‌ ನಾಳೆ ಪ್ರಮಾಣವಚನ
  • ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ
    ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ
  • ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
    ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Designed by Elegant Themes | Powered by WordPress

error: Content is protected !!