ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

Posted by Bantwala Isiri News | Feb 16, 2026 | ಬಂಟ್ವಾಳ | 0 |

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ – ಗಂಡನ ಪ್ರಣಯದಾಟ ಬಿಚ್ಚಿಟ್ಟ ಪತ್ನಿ

– ಹುಡುಗಿಯರ ಹಣದಲ್ಲೇ ದಿಲ್ದಾರ್‌ ಮಾಡ್ತಿದ್ದ ʻಮಂಗಳೂರು ಮನ್ಮಥʼ
– ಹೆಂಡ್ತಿ ಓಡಿಹೋಗಿದ್ದಾಳೆ ಅಂತ ಅನ್ಯ ಯುವತಿಯರ ಜೊತೆಗೆ ಚಕ್ಕಂದ

ಮಂಗಳೂರು: ಮ್ಯಾಟ್ರಿಮೋನಿಯಲ್ಲಿ (Matrimony) ಪರಿಚಯ ಮಾಡಿಕೊಂಡು ಮದ್ವೆಯಾಗಿ ನಂಬಿಸಿ ಹಣ ವಂಚಿಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ʻಮಂಗಳೂರು ಮನ್ಮಥʼನ ಪ್ರಕರಣ ಬೆಳಕಿಗೆ ಬಂದಿದೆ. ಈತ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಅನ್ನೋದು ಗೊತ್ತಾಗಿದೆ.

ಗಂಡನ ಪ್ರೀತಿ, ಪ್ರೇಮ, ಪ್ರಣಯದಾಟವನ್ನ ಸ್ವತಃ ಪತ್ನಿಯೇ ಬಟಾಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಗೆ (Mangaluru Women Police Station) ದೂರು ನೀಡಿದ್ದಾರೆ.

ಸಂತ್ರಸ್ತೆ ಪ್ರೀತಿ ಎಂಬಾಕೆಗೆ ಫೇಸ್​​ಬುಕ್​​ನಲ್ಲಿ ಪರಿಚಯವಾಗಿದ್ದ ಆರೋಪಿ ಪತಿ ಮನೀಶ್​​, ಬ್ಲ್ಯಾಕ್​​ಮೇಲ್​​ ಮಾಡಿ ಆಕೆಯನ್ನ ಮದುವೆ ಆಗಿದ್ದನಂತೆ. ಮದುವೆಗೆ ಮೂರು ದಿನ ಬಾಕಿಯಿರುವಾಗಲೇ ಹಣ ಇಲ್ಲ ಅಂತ ಆತ್ಮಹತ್ಯೆ ನಾಟಕವಾಡಿದ್ದಾನೆ. ಇದನ್ನ ನಂಬಿ ಮದ್ವೆಗೆ ಎಲ್ಲ ಖರ್ಚನ್ನ ತಾವೇ ನೋಡಿಕೊಂಡು ಪ್ರೀತಿ (Preeti) ಪೋಷಕರು ವಿವಾಹ ಕಾರ್ಯ ನಡೆಸಿಕೊಟ್ಟಿದ್ದರು. ಅಲ್ಲದೇ 2 ಲಕ್ಷ ಹಣ ಕೊಟ್ಟು ವಿದೇಶದಲ್ಲಿ ಮನೀಶ್​​ಗೆ ಕೆಲಸ ಕೊಡಿಸಲು ಪ್ರೀತಿ ಸಹಾಯ ಮಾಡಿದ್ದರು. ಆದ್ರೆ ದುಬೈಗೆ ಹೋದ ಈತ ಬಹರೇನ್​​ನಲ್ಲಿರೋ ಮಹಿಳೆ ಜೊತೆ ಲವ್ವಿಡವ್ವಿ ಶುರುಮಾಡಿದ್ದಾನೆ.

ವಿಚಾರ ತಿಳಿದ ಪ್ರೀತಿ, ಮನೀಶ್‌ನ ಪುರಾಣ ಕೆದಕಲು ಶುರು ಮಾಡಿದ್ದಾರೆ. ಈ ವೇಳೆ ಮನೀಶ್​​ನ ನಿಜರೂಪ ಬಯಲಾಗಿದೆ. ಮದ್ವೆಗೂ ಮುನ್ನ ಅನೇಕ ಯುವತಿಯರ ಜೊತೆಗೆ ಚಕ್ಕಂದ ಆಡಿರೋದು ಗೊತ್ತಾಗಿದೆ.

ಹೌದು. ಪ್ರೀತಿ ಜೊತೆ ಮದುವೆಗೂ (Marriage) ಮುನ್ನ ಹಲವು ಯುವತಿಯರ ಜೊತೆ ಲವ್ ಅಫೇರ್​​ ಹೊಂದಿದ್ದ ಮನೀಶ್​​, ಅವರ ಬಳಿ ಕೂಡ ಹಣ ಪಡೆದು ಮೋಸ ಮಾಡಿದ್ದ. ಈ ವಿಚಾರವನ್ನ ಆ ಯುವತಿಯರೇ ಪ್ರೀತಿಗೆ ತಿಳಿಸಿದ್ದಾರೆ. ಹಣ ವಾಪಾಸ್ ಕೇಳಿದ್ರೆ ಎಲ್ಲ ಯುವತಿಯರ ಬಳಿ ಒಂದೇ ನಾಟಕ ಆಡಿದ್ದ ಆರೋಪಿ, ತನಗೆ ಬ್ರೈನ್​ ಟ್ಯೂಮರ್ ಇದೆ, ಹಾರ್ಟ್‌ನಲ್ಲಿ ತೂತಿದೆ ಎಂದು ಹೇಳಿ ಹಣ ಕೊಡದೇ ಲವ್ ಬ್ರೇಕ್ ಅಪ್ ಮಾಡಿಕೊಳ್ತಿದ್ದ ಎಂದು ದೂರಿನಲ್ಲಿ ಪ್ರೀತಿ ತಿಳಿಸಿದ್ದಾರೆ.

ಟಿಕ್ ಟಾಕ್ ಮಾಡಿ ಯುವತಿಯರಿಗೆ ಗಾಳ ಹಾಕುವ ಮನೀಶ್ ನಡೆತೆಯಿಂದ ಬೇಸತ್ತ ಪತ್ನಿ ಪ್ರೀತಿ, ಇಂತಹ ಗಂಡ ಬೇಡ. ಈತನ ನಂಬಿ ಮತ್ತೆ ಯಾರು ಮೋಸ ಹೋಗಬಾರದು ಎಂದು ಅಲವತ್ತುಕೊಂಡಿದ್ದಾರೆ.

Share:

Rate:

Previousರೂ.2 ಕೋಟಿ ಅನುದಾನದಲ್ಲಿ ಡಾಮರೀಕರಣಗೊಂಡ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸಂಪರ್ಕ ರಸ್ತೆ ಉದ್ಘಾಟನೆ
Nextಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF) ಉದ್ಘಾಟಿಸಿದ ಪ್ರಧಾನಮಂತ್ರಿ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ – ಸಂಗೀತ ಶರ್ಮ ಪಿ. ಜಿ.

ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ – ಸಂಗೀತ ಶರ್ಮ ಪಿ. ಜಿ.

11 February 2025

ಅರಮನೆ, ಪ್ರತಿಮೆಗಳಿಗೆ ತೊಂದರೆ, ಇಂದಿನಿಂದ ಪಾರಿವಾಳಗಳಿಗೆ ಕಾಳು ಹಾಕಬೇಡಿ: ಸಂಸದ ಯದುವೀರ್ ಒಡೆಯರ್

ಅರಮನೆ, ಪ್ರತಿಮೆಗಳಿಗೆ ತೊಂದರೆ, ಇಂದಿನಿಂದ ಪಾರಿವಾಳಗಳಿಗೆ ಕಾಳು ಹಾಕಬೇಡಿ: ಸಂಸದ ಯದುವೀರ್ ಒಡೆಯರ್

23 September 2024

ವಿವಿಧ ಹೆದ್ದಾರಿಗಳ ಮೂಲಸೌಕರ್ಯಗಳ ಸುಧಾರಣೆ ಕುರಿತಂತೆ ಚರ್ಚೆ

ವಿವಿಧ ಹೆದ್ದಾರಿಗಳ ಮೂಲಸೌಕರ್ಯಗಳ ಸುಧಾರಣೆ ಕುರಿತಂತೆ ಚರ್ಚೆ

20 March 2025

ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಚಾಲನೆ

ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್‌ ರೈಲಿಗೆ ಚಾಲನೆ

10 August 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ವಿಕಿರಣ ಸೋರಿಕೆಯಾದ್ರೆ ಟೆಹ್ರಾನ್ ಅಷ್ಟೇ ಅಲ್ಲ, ಗಲ್ಫ್ ರಾಷ್ಟ್ರಗಳೂ ಸರ್ವನಾಶ, ಇರಾನ್ ಎಚ್ಚರಿಕೆ
    ವಿಕಿರಣ ಸೋರಿಕೆಯಾದ್ರೆ ಟೆಹ್ರಾನ್ ಅಷ್ಟೇ ಅಲ್ಲ, ಗಲ್ಫ್ ರಾಷ್ಟ್ರಗಳೂ ಸರ್ವನಾಶ, ಇರಾನ್ ಎಚ್ಚರಿಕೆ
  •  ಟೆಹ್ರಾನ್‌ ಮೇಲೆ ಅಮೆರಿಕ ನಡೆಸಿದ ದಾಳಿ – ಇರಾನ್‌ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳ ಹತ್ಯೆ
     ಟೆಹ್ರಾನ್‌ ಮೇಲೆ ಅಮೆರಿಕ ನಡೆಸಿದ ದಾಳಿ – ಇರಾನ್‌ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳ ಹತ್ಯೆ
  • ದಂತ ಭಾಗ್ಯ ಯೋಜನೆ : ಹಿರಿಯರ ಮೊಗದಲ್ಲಿ ಮಂದಹಾಸದೊಂದಿಗೆ ಆತ್ಮವಿಶ್ವಾಸ ಮೂಡಿಸೋಣ
    ದಂತ ಭಾಗ್ಯ ಯೋಜನೆ : ಹಿರಿಯರ ಮೊಗದಲ್ಲಿ ಮಂದಹಾಸದೊಂದಿಗೆ ಆತ್ಮವಿಶ್ವಾಸ ಮೂಡಿಸೋಣ
  • ದಾವಣಗೆರೆ : ರಂಗೋಲಿ ಮೂಲಕ ಮತದಾನ ಜಾಗೃತಿ
    ದಾವಣಗೆರೆ : ರಂಗೋಲಿ ಮೂಲಕ ಮತದಾನ ಜಾಗೃತಿ
  • ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬಸ್‌ ಪಾಸ್‌ ಅವಧಿಯನ್ನು ಏಪ್ರಿಲ್‌ 10ರ ವರೆಗೆ ವಿಸ್ತರಣೆ
    ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬಸ್‌ ಪಾಸ್‌ ಅವಧಿಯನ್ನು ಏಪ್ರಿಲ್‌ 10ರ ವರೆಗೆ ವಿಸ್ತರಣೆ
  • ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಉಪಚುನಾವಣೆ ಪ್ರಚಾರ ಸಭೆ
    ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಮಟ್ಟಿ ಗ್ರಾಮದಲ್ಲಿ ನಡೆದ ಉಪಚುನಾವಣೆ ಪ್ರಚಾರ ಸಭೆ
  • Centre for Ethics Observes International Women’s Day and Transgender Visibility Day
    Centre for Ethics Observes International Women’s Day and Transgender Visibility Day
  • ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
    ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
  • ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಇಲ್ದಿದ್ರೆ ಬೀಳುತ್ತೆ ಭಾರೀ ದಂಡ
    ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಇಲ್ದಿದ್ರೆ ಬೀಳುತ್ತೆ ಭಾರೀ ದಂಡ
  • ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು
    ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ – ಕೆಳಗೆ ಬಿದ್ದ ವಿದ್ಯಾರ್ಥಿನಿಯರು

Designed by Elegant Themes | Powered by WordPress

error: Content is protected !!