ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕಿನ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಉಚಿತ ಏಳು ದಿನಗಳ ಉಚಿತ ಮದುಮಗಳ ಶೃಂಗಾರ ತರಬೇತಿ ಶಿಬಿರ ಮಾರ್ಚ್ 9 ರಂದು ಪ್ರಾರಂಭಿಸಲಾಯಿತು. ಇದನ್ನೂ ಓದಿ :  ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ

ಶಿಬಿರಕ್ಕೆ ಚಾಲನೆ ನೀಡಿದ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಮಾತಾಡಿ, ಜ್ಞಾನವಿಕಾಸ ಕಾರ್ಯಕ್ರಮಗಳು ಆರ್ಥಿಕ, ಸಾಮಾಜಿಕ, ಸಬಲೀಕರಣದ ಮೂಲಕ ಮಹಿಳೆಯರು ಮುಖ್ಯ ವಾಹಿನಿಗೆ ಬರಲು ಕಾರಣವಾಗಿದೆ.ಹಾಗು ಏಳು ದಿನದ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಿ ಎಂದರು.

ಉಚಿತ ಮದುಮಗಳ ಶೃಂಗಾರ ತರಬೇತಿ ಶಿಬಿರ

ಜ್ಞಾನವಿಕಾಸರ ಯೋಜನಾಧಿಕಾರಿಯಾದ ಮಲ್ಲಿಕಾ ಶಿಬಿರದ ಬಗ್ಗೆ ಪ್ರಾಸ್ತವಿಕ ನುಡಿಗಳನ್ನಾಡಿದರು.

ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಜನಜಾಗೃತಿ ಸದಸ್ಯರಾದ ಭಾರತೀ ಚೌಟ. ಸದಾನಂದ ಗೌಡ ನಾವೂರ್. ತರಬೇತಿ ಶಿಕ್ಷಕಿಯಾದ ಶೋಭಾ ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು .