ಮಂಗಳೂರು: ಚಲಿಸುತ್ತಿದ್ದ ಬಸ್ನಿಂದ ಏಕಾಏಕಿ ಡೋರ್ ಓಪನ್ ಆಗಿದ್ದು, ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್ನಲ್ಲಿ ನಡೆದಿದೆ. ಇದನ್ನೂ ಓದಿ : ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು – ಕುಮಾರಚಂದ್ರ
ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಸಂಚಾರದ ವೇಳೆ ಇದ್ದಕ್ಕಿದ್ದಂತೆ ಬಸ್ನ ಬಾಗಿಲು ತೆರೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾಗೆ ಗಾಯಗಳಾಗಿವೆ.
ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಗಿಎಬಸ್ನಿಂದ ಬಿದ್ದ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
