9 ತಿಂಗಳಿಂದ 9 ವರ್ಷದ ಅವಧಿಯಲ್ಲಿ ನಾಲ್ಕು ವಿಭಿನ್ನ ಅರ್ಬುದ ರೋಗಗಳ್ಳನ್ನು ಹಿಮ್ಮೆಟ್ಟಿಸಿ ಬಾಳಿದ ಹೆಣ್ಣು ಮಗುವಿನ ಅಮೋಘ ಕಥೆ

ಭಾರತದಲ್ಲೇ ಮೊಟ್ಟಮೊದಲು ಎನ್ನಬಹುದಾದ ಒಂದು ಘಟನೆ ಯೆನೆಪೊಯ ವೈದ್ಯಕೀಯ ಕಾಲೇಜಿನ ಜುಲೇಖಾ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯಲ್ಲಿ ನಡೆದಿದೆ. ಡಾ. ಜಲಾಲುದ್ದೀನ್ ಅಕ್ಬರ್ ಮತ್ತು ಅವರ ತಂಡವು ಉಲ್ಲೇಖಿಸಿದ ಮಗುವಿನ ಮೇಲೆ ೧೦ ಗಂಟೆಗಳ ಸುಧೀರ್ಘವಾದ ಶಸ್ತ್ರಚಿಕಿತ್ಸೆಯ ಮೂಲಕ ಶ್ವಾಸಕೋಶದಲ್ಲಿ 40 ಕ್ಕೂ ಹೆಚ್ಚು ಕ್ಯಾನ್ಸರ್ ನಿಕ್ಷೇಪಗಳನ್ನು ಯಶಸ್ವಿಯಾಗಿ ತೆಗೆದಿದ್ದಾರೆ. ಹಾಗು 9 ದಿನಗಳ್ಳಲ್ಲಿ ಮಗುವಿನ ಚೇತರಿಕೆಯನ್ನು ಖಾತರಿ ಪಡಿಸಿದ್ದಾರೆ.

ಸಾರಾಂಶ
ಉಲ್ಲೇಖಿಸಿದ ಹೆಣ್ಣು ಮಗು ತನ್ನ ಜೀವನದ 9 ನೇ ತಿಂಗಳಿನಿಂದ ದೇಹದ 4 ವಿವಿಧ ಭಾಗ ಗಳಾದ ಕಣ್ಣು, ತೊಡೆಯ ಮೂಳೆ, ಕರುಳು ಮತ್ತು ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದಳು. ತನ್ನ 9 ನೇ ತಿಂಗಳಿನಲ್ಲಿ ಮದುರೈ ಅರವಿಂದ್ ಆಸ್ಪತ್ರೆ ಮತ್ತು ಹೈದರಾಬಾದ್ ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ಅರ್ಬುದ ರೋಗಗಕ್ಕೆ ಚಿಕಿತ್ಸೆ ಪಡೆದಿದ್ದಳು.

2021 ರಲ್ಲಿ ತೊಡೆ ಮೂಳೆಯ ಅರ್ಬುದ ರೋಗಗಕ್ಕೆ ಕೊಚ್ಚಿಯ ಲೇಕ್ ಶೋರ್ ಆಸ್ಪತ್ರೆ ಮತ್ತು ಎಸ್‌ವಿಟಿ ಆಸ್ಪತ್ರೆ ತಿರುವನಂತಪುರದಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. 2022 ರಲ್ಲಿ ಕೊಚ್ಚಿಯಲ್ಲಿ ಶ್ವಾಸಕೋಶದ ದ್ವಿತೀಯಕಗಳಿಗೆ (ಶ್ವಾಸಕೋಶಕ್ಕೆ ಹರಡುವಿಕೆಗೆ) ಚಿಕಿತ್ಸೆ ಹಾಗು 2023 ರಲ್ಲಿ ತಿರುವನಂತಪುರದ ಸರ್ಕಾರಿ ಕಾಲೇಜಿನಲ್ಲಿ ಕರುಳಿನ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು, ನಂತರ ಮಿತ್ರ ಆಸ್ಪತ್ರೆ ಕ್ಯಾಲಿಕಟ್‌ನಲ್ಲಿ ಚಿಕಿತ್ಸೆ ಮುಂದುವರಿಸಿದರು, ಈ ಸಮಯದಲ್ಲಿ ಶ್ವಾಸಕೋಶದ ದ್ವಿತೀಯಕಗಳ ಕ್ಯಾನ್ಸರ್ ಮತ್ತೆ ಅಭಿವೃದ್ಧಿಗೊಂಡಿದ್ದು, ಕಂಡುಬಂದು ಇದಕ್ಕೆ ಹೆಚ್ಚಿನ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೆಂದು ಸೂಚಿಸಿರುತ್ತಾರೆ..

ಪ್ರಸಕ್ತ ರೋಗಾಸ್ಥಿತಿಯು ಭಾರತದಾದ್ಯಂತ 250 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಒಳಗೊಂಡಿರುವ ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್‌ನಲ್ಲಿ ಮುಂದಿನ ನಿರ್ವಹಣೆಯ ಕುರಿತು ಚರ್ಚಿಸಲಾಯಿತು ಹಾಗು ಶಾಸ್ತ್ರಚಿಕಿತ್ಸೆಯ ಅಗತ್ಯತೆಯನ್ನು ನಿರ್ಧರಿಸಲಾಯಿತು.
ಸೂಚಿಸಿದಂತಹ ಶಸ್ತ್ರಚಿಕಿತ್ಸೆ ಅತ್ಯಂತ ಸಂಕೀರ್ಣ ಮತ್ತು ಕ್ಲಷ್ಟಕರವಾಗಿರುವದರಿಂದ ರೋಗಿಯ ಪರಿವಾರವನ್ನು ಟಾಟಾ ಮೆಮೋರಿಯಲ್ ಆಸ್ಪತ್ರೆ ಅಥವಾ ಮಂಗಳೂರಿನ ಯೆನೆಪೊಯ ವೈದ್ಯಕೀಯ ಕಾಲೇಜಿನ ಡಾ. ಜಲಾಲುದ್ದೀನ್ ಅಕ್ಬರ್ ಅವರನ್ನು ಸಂಪರ್ಕಿಸಲು ಮಾರ್ಗದರ್ಶಿಸಲಾಯಿತು. ರೋಗಿಯ ಸಂಭದಿಕರು ಮಂಗಳೂರಿನ ಡಾ.ಜಲಾಲುದ್ದೀನ್ ಅಕ್ಬರ್ ಅವರ ಬಳಿ ಚಿಕಿತ್ಸೆ ಪಡೆಯಲು ಆದ್ಯತೆ ನೀಡಿರುವುದರಿಂದ, ಪ್ರಕರಣವನ್ನು ಜುಲೇಖಾ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಟ್ಯೂಮರ್ ಬೋರ್ಡ್‌ನಲ್ಲಿ ಚರ್ಚಿಸಲಾಯಿತು. ಹಾಗು ಆಸ್ಪತ್ರೆಯಲ್ಲಿ ಅತ್ಯಅಧುನಿಕ ಸೌಕರ್ಯಗಳ ಲಭ್ಯತೆಯಿರುವುದರಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯನ್ನು ಇಲ್ಲಿ ನಡೆಸಲು ನಿರ್ಧರಿಸಲಾಯಿತು.. ಅದರಂತೆ ೧೦ ಗಂಟೆಗಳ ದೀರ್ಘ ಶಾಸ್ತ್ರಚಿಕಿತ್ಸೆಇಂದ ಶ್ವಾಸಕೋಶ ಹಾಗು ಎರಡು ಪಕ್ಕೆಲುಬುಗಳಿಂದ ಎಲ್ಲಾ ಗೆಡ್ಡೆಗಳನ್ನು, ತೆಗೆದು ಭಾರತದೆಲ್ಲೆ ಶಾಸ್ತ್ರಚಿಕಿತ್ಸೆಯ ಮೂಲಕ ಅತೀ ಹೆಚ್ಚು ಗೆಡ್ಡೆಗಳು. ಗೆಡ್ಡೆಗಳ್ಳನ್ನು ತೆಗೆಯ ಕೀರ್ತಿಗೆ ಭಾಜನವಾಯಿತು.

ತಂಡದ ಪರಿಚಯ
ಡಾ.ವಿಜಯಕುಮಾರ್ ಎಂ. ಅವರ ಸಮರ್ಥ ಮಾರ್ಗದರ್ಶನದಲ್ಲಿ ಡಾ.ಜಲಾಲುದ್ದೀನ್ ಅಕ್ಬರ್ ನೇತ್ರತ್ವದಲ್ಲಿ, ಡಾ.ರೋಹನ್ ಶೆಟ್ಟಿ, ಡಾ.ಎಚ್.ಟಿ.ಅಮರ್ ರಾವ್, ಡಾ.ನೂರ್ ಮೊಹಮ್ಮದ್ ಅವರನ್ನೊಳಗೊಂಡ ಶಸ್ತ್ರಚಿಕಿತ್ಸಾ ತಂಡ, ಹಾಗು ಅರಿವಳಿಕೆ ತಜ್ಞರಾದ ಡಾ. ತಿಪ್ಪೇಸ್ವಾಮಿ ನೇತೃತ್ವದಲ್ಲಿ ಡಾ.ಸಂದೇಶ್( ಪೀಡಿಯಾಟ್ರಿಕ್ ವಿಭಾಗ) ಡಾ. ಡಾ.ಆದರ್ಶ್ (ಪಲ್ಮನಾಲಜಿ ವಿಭಾಗ), ಡಾ. ವಿನೀತ್ (ಇಂಟೆನ್ಸಿವಿಸ್ಟ್) ಇವರುಗಳು ಮಗುವಿನ ಶಾಸ್ತ್ರಚಿಕಿತ್ಸ್ ಹಾಗು ಶಾಸ್ತ್ರಚಿಕಿತ್ಸ್ ನಂತರದ ನಿರ್ವಹಣೆಯನ್ನು ಮಾಡಿ ಶೀಘ್ರ ಚೇತರಿಕೆಯನ್ನು ಖಾತ್ರಿಪಡಿಸಿರುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರೆಹಮಾನ್ ಎ ಎ ಉಪಸ್ಥಿತರಿದ್ದು, ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಜುಲೇಖಾ ಯೆನೆಪೊಯ ಆಂಕೊಲಾಜಿ ಸಂಸ್ಥೆಯು ಈ ರೀತಿಯ ಅಪರೂಪದ ಶಸ್ತ್ರಚಿಕಿತ್ಸೆ ಪ್ರಕರಣಗಳನ್ನು ಆಧುನಿಕ ಸೌಕರ್ಯಗಳ ಮತ್ತು ರೋಗನಿರ್ಣಯ ಸೇವೆಗಳು ಮತ್ತು ಸೌಲಭ್ಯಗಳ ಸಹಾಯದಿಂದ ನಡೆಸುತ್ತಿದೆ ಎಂದು ತಮ್ಮ ಮಾತುಗಳ್ಳಲ್ಲಿ ತಿಳಿಸಿದರು.