ಬೆಂಗಳೂರಿನಲ್ಲಿಂದು ಲೋಕಸಭಾ ಚುನಾವಣೆಯ ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಹಾಗೂ ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಯಾನದ ವಾಹನಗಳಿಗೆ ಚಾಲನೆ ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು.
ಸಾಮಾನ್ಯ ಪ್ರಜೆಯ ಭಾವನೆಗಳನ್ನು ಆಧರಿಸಿ ರೂಪಿಸುವುದು ಬಿಜೆಪಿ ಪ್ರಣಾಳಿಕೆ ಆಗಬೇಕು, ಅದು ದೇಶದ ಅಭಿವೃದ್ಧಿಯ ದಿಕ್ಸೂಚಿ ಆಗಬೇಕು ಎನ್ನುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕಾಳಜಿಯಾಗಿದ್ದು, ವಿಕಸಿತ ಭಾರತಕ್ಕಾಗಿ ಬಿಜೆಪಿ ಸಂಕಲ್ಪ ಪತ್ರ ಅಭಿಯಾನವನ್ನು ಆರಂಭಿಸಿದ್ದು ಅತ್ಯಂತ ಸರಳವಾಗಿ ಮಿಸ್ ಕಾಲ್ ಕೊಡುವ ಮೂಲಕ ಹಾಗೂ ವಾಯ್ಸ್ ರೆಕಾರ್ಡ್ ಮೂಲಕವೂ ಈ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
9090902024 ಗೆ ಮಿಸ್ ಕಾಲ್ ಕೊಡುವ ನಂತರ ಬರುವ ಲಿಂಕ್ ಅನ್ನು ಬಳಸಿ, ನಮೋ ಆಪ್ ಮೂಲಕ ಅಥವಾ ವಿಕಸಿತ ಭಾರತದ ಯಾತ್ರೆಯ ರಥ ತೆರಳುವ ಸ್ಥಳಗಳಲ್ಲಿ ಇರಿಸಲಾಗುವ ಪೆಟ್ಟಿಗೆಗಳಲ್ಲಿ ವಿವಿಧ ವರ್ಗಗಳ ಜನರೆಲ್ಲರೂ ತಮ್ಮ ಅಭಿಪ್ರಾಯಗಳನ್ನು ಬರೆದು ತಿಳಿಸಬೇಕೆಂದು ವಿನಂತಿಸಲಾಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ @RAshokaBJP, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @DVSadanandGowda, ಮಾಜಿ ಉಪಮುಖ್ಯಮಂತ್ರಿಗಳಾದ @drashwathcn, ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ @BABasavaraja, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ @NSNandiesha, ರಾಜ್ಯ ಉಪಾಧ್ಯಕ್ಷೆ ಶ್ರೀಮತಿ @MalavikaBJP, ರಾಜ್ಯ ಕಾರ್ಯದರ್ಶಿ ಶ್ರೀಮತಿ ಅಂಬಿಕಾ ಹುಲಿನಾಯ್ಕರ್, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರೀ ಮತ್ತು ನಿವೃತ್ತ ಐ.ಎ.ಎಸ್. ಅಧಿಕಾರಿ ಸಿ. ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ದಕ್ಷಿಣ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ನಗರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿಗೌಡ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.