ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ (ರಿ.)ಮಾರುತಿನಗರ ನರಿಕೊಂಬು ಪಾಣೆಮಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಿದ ವ್ಯಾಯಮಶಾಲೆ ಹಾಗೂ ಸಭಾಭವನ ಲೋಕಾರ್ಪಣೆ ದಿನಾಂಕ 7-1-2024 ನೇ ಆದಿತ್ಯವಾರ ವೇದಮೂರ್ತಿ ರಾಜಗೋಪಾಲಾಚಾರ್ಯ ನರಿಕೊಂಬು ರವರ ಪೌರೋಹಿತ್ಯದಲ್ಲಿ ನಡೆಯಲಿದೆ

ವ್ಯಾಯಮಶಾಲೆಯ ಉದ್ಘಾಟನೆ ಹಾಗೂ ಆಶೀರ್ವಾಚನ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾಡಲಿದ್ದು, ಸಭಾಭವನದ ಉದ್ಘಾಟನೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ನೆರೆವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ವಹಿಸಿಲಿರುವರು. ಈ ಸಂದರ್ಭದಲ್ಲಿ ಎರಕಳ ದಿ| ಬಿ ಗಣೇಶ ಸೋಮಯಾಜಿ ವೇದಿಕೆ ಯಾರಕಳ ಕುಟುಂಸ್ಥರಿಂದ ಅನಾವರಣಗೊಳ್ಳಲಿದೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ರಮಾನಾಥ ರೈ, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ಲೋಟಸ್ ಗ್ರೂಪ್ ಮಂಗಳೂರುನ ಜಿತೇ೦ದ್ರ ಎಸ್ ಕೊಟ್ಟಾರಿ, ವೇದಮೂರ್ತಿ ಜನಾರ್ಧನ ವಾಸುದೇವ ಭಟ್ ಮೊಗರ್ನಾಡು ,ಜಗನಾಥ್ ಬಂಗೇರ ನಿರ್ಮಾಲ್, ಪ್ರಕಾಶ್ ಕಾರಂತ್ ನರಿಕೊಂಬು, ಕೃಷ್ಣನಂದ ಮಾಣಿಮಜಲ್, ಪದ್ಮನಾಭ ಮಯ್ಯ, ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾದವ ಗೌಡ, ಹರೀಶ್ ಪುತ್ರೂಟ್ಟಿಬೈಲು, ಪಂಚಾಯತ್ ಸದಸ್ಯರುಗಳಾದ ಪ್ರಕಾಶ್ ಕೋಡಿಮಜಲು, ಶುಭ ಶಶಿಧರ್,ಮೊದಲಾದವರು ಭಾಗವಹಿಸಲಿರುವರು.

ಸಭಾ ಕಾರ್ಯಕ್ರಮದ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಕಲಿರುವುದು ಎಂದು ವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ (ರಿ.)ಮಾರುತಿನಗರ ನರಿಕೊಂಬು ಅಧ್ಯಕ್ಷ ಚಂದ್ರಹಾಸ ಕೋಡಿಮಜಲು ತಿಳಿಸಿರುತಾರೆ.