ಪಾಕಿಸ್ತಾನದ ವಿರುದ್ಧ ಬಲೂಚಿಸ್ತಾನ್ ಸ್ವಾತಂತ್ರ್ಯ ಘೋಷಿಸಿದ್ದು, ಭಾರತದ ಬೆಂಬಲ ಕೋರಿದೆ. ಜೊತೆಗೆ ವಿಶ್ವಸಂಸ್ಥೆಯಿಂದ ಮಾನ್ಯತೆ ಮತ್ತು ದೆಹಲಿಯಲ್ಲಿ ರಾಯಭಾರ ಕಚೇರಿ ಸ್ಥಾಪನೆಗೆ ಬಲೂಚ್ ಮನವಿ ಮಾಡಿದೆ.
ನವದೆಹಲಿ: ಭಾರತದ ವಿರುದ್ಧ ನಿರಂತರ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಆದರದ್ದೇ ಭಾಗವಾಗಿರುವ ಬಲೂಚಿಸ್ತಾನ್ ತಿರುಗಿ ಬಿದ್ದಿದ್ದು, ಸ್ವಾಂತಂತ್ರ ಘೋಷಿಸಿಕೊಂಡಿದೆ. ಭಾರತ ಆಪರೇಷನ್ ಸಿಂಧೂರ್ ನಡೆಸಿದ ಮರುದಿನವೇ ಪಾಕಿಸ್ತಾನದ ವಿರುದ್ಧ ತಿರುಗಿ ಬಿದ್ದಿರುವ ಬಲೂಚಿಸ್ತಾನ್ ನಿನ್ನೆಯಷ್ಟೇ ಬಾಂಬ್ ದಾಳಿ ನಡೆಸಿ ಪಾಕಿಸ್ತಾನದ 14 ಯೋಧರ ಬಲಿ ಪಡೆದಿತ್ತು. ಆದರೆ ಇಂದು ಬಲೂಚಿಸ್ತಾನ್ ನಾಯಕರು ಪಾಕಿಸ್ತಾನದಿಂದ ಬೇರೆಯಾಗಿ ಸ್ವಾತಂತ್ರ ದೇಶವಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.