ಬಂಟ್ವಾಳ:ಮೊಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ವಠಾರದಲ್ಲಿ ಜರಗಲಿರುವ ಅತಿರುದ್ರ ಮಹಾಯಾಗದ ಪ್ರಯುಕ್ತ 2ನೇ ದಿನವಾದ ನಿನ್ನೆ ಶ್ರೀ ದೇವರಿಗೆ ಅತಿಮಹಾರುದ್ರ ಪಾರಾಯಣ ನಡೆಯಿತು.

ಪ್ರತಿನಿತ್ಯ ಶ್ರೀ ಕ್ಷೇತ್ರದಲ್ಲಿ ಈ ಪಾರಾಯಣ ಮೇ 4 ರಂದು ನಡೆಯುವ ಯಾಗದವರೆಗೂ ನಡೆಯಲಿದೆ. ನಿತ್ಯ ಅನ್ನದಾನವೂ ನಡೆಯುತ್ತದೆ.

ವಾರಾಣಾಸಿ ಕಾಶಿಮಠ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ಈ ಯಾಗ ನಡೆಯಲಿದೆ.

ಚಿತ್ರದುರ್ಗದ ಬಹ್ಮಾನಂದ ರೆಡ್ಡಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಇಂದಿನ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ದೀಪ ಬೆಳಗಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಗೌರವಧ್ಯಕ್ಷರಾದ ರಘುನಾಥ ಸೋಮಯಾಜಿ, ಕಾರ್ಯಧ್ಯಕ್ಷರಾದ ಜಗನ್ನಾಥ ಚೌಟ ಭಾಗವಹಿಸಿದ್ದರು.