ನಮ್ಮ ಕಾಂಗ್ರೆಸ್  ಸರ್ಕಾರ ಆರಂಭಿಸಿದ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಿ.ಎಂ.ಸಿದ್ಧರಾಮಯ್ಯ ಹೇಳಿದರು.
ಅವರು ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025” “ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು.
ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು ಎಂದರು.ಇದನ್ನೂ ಓದಿ:  ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌
ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು.
ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು. ಇದನ್ನೂ ಓದಿ : ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ – ಅವಮಾನಗೊಂಡಿದ್ದರಿಂದ ಡೆತ್‌ನೋಟ್ ಬರೆದು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ
ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ.
ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದರು. ಇದನ್ನೂ ಓದಿ : ಪಾಕ್ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ
–