ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡರ ಪರವಾಗಿ ನಡೆದ ಬೂತ್ ಮುಖಂಡರು ಮತ್ತು ಬ್ಲಾಕ್ ಮುಖಂಡರುಗಳ ಬೃಹತ್ ಸಭೆಯನ್ನು ಹಾಗೂ ಚುನಾವಣಾ ಪ್ರಚಾರ ಸಭೆಯನ್ನು ಸಿ.ಎಂ.ಸಿದ್ಧರಾಮಯ್ಯ ಉದ್ಘಾಟಿಸಿದರು.
ಬಳಿಕ ಮಾತನಾಡಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ|| ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ.
ಬಿಜೆಪಿ ಅಭ್ಯರ್ಥಿ Shobha Karandlaje ಅವರಿಗೆ ನೀವು ಮತ ಹಾಕಲು ಕಾರಣಗಳೇ ಇಲ್ಲ. ಅವರು ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳು ಬಗ್ಗೆ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಲಿಲ್ಲ.
ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ BJP Karnataka ಕಾರ್ಯಕರ್ತರೇ ಗೋ-ಬ್ಯಾಕ್ ಎಂದು ಓಡಿಸಿದ್ದಾರೆ. ಗೆಲ್ಲಿಸಿದ ಕ್ಷೇತ್ರದ ಕಾರ್ಯಕರ್ತರೇ ಅವರನ್ನು ಗೋ ಬ್ಯಾಕ್ ಎಂದು ಕಳುಹಿಸಿದ್ದಾರೆ. ಆದ್ದರಿಂದ ಅವರಿಗೆ ಇಲ್ಲಿ ಮತಹಾಕಲು ಕಾರಣಗಳೇ ಇಲ್ಲ.
ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ಜನರ ಕೆಲಸ ಮಾಡಲಿಲ್ಲ. ಈ ಕಾರಣಕ್ಕೇ ಮೋದಿಯವರ ಮುಖನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅವರೂ ಸರ್ಕಾರ ನಡೆಸಿ ಜನರ ಕೆಲಸ ಮಾಡದೆ ತಿರಸ್ಕೃತಗೊಂಡರು. ಹೀಗಾಗಿ ಇವರೂ Narendra Modi ಮುಖ ನೋಡಿ ಮತ ಹಾಕಲು ಕೇಳುತ್ತಿದ್ದಾರೆಯೇ ಹೊರತು ತಮ್ಮ ಸಾಧನೆಗಳ ಮೇಲೆ ಕೇಳುತ್ತಿಲ್ಲ.
ಕೇಂದ್ರ Bharatiya Janata Party (BJP) ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ?
ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ನಮಗೆ ಶಕ್ತಿ ತುಂಬಿ ಎಂದು ಮನವಿ ಮಾಡುತ್ತೇನೆ ಎಂದರು.