ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಯೋಗ ಗುರು ಸ್ವಾಮಿ ಶಿವಾನಂದರು 128ನೇ ವಯಸ್ಸಿನಲ್ಲಿ ವಾರಣಾಸಿಯಲ್ಲಿ ನಿಧನರಾಗಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶತಾಯುಷಿ ಯೋಗ ಗುರು ಸ್ವಾಮಿ ಶಿವಾನಂದ ಇಂದು ನಿಧನರಾಗಿದ್ದಾರೆ. ಅವರಿಗೆ 128 ರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿರಂತರ ಯೋಗ ಮಾಡುತ್ತಲೇ ಅವರು ತಮ್ಮ ಆರೋಗ್ಯವನ್ನು ಬಹಳ ಕಾಳಜಿಯಿಂದ ರಕ್ಷಿಸಿಕೊಂಡು ಬಂದಿದ್ದರು. ಮೂರು ವರ್ಷದ ಹಿಂದೆ ಅವರಿಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರಾಣಾಸಿಯ ಬಿಹೆಚ್ಯು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಶನಿವಾರ ರಾತ್ರಿ ಅವರು ನಿಧನರಾಗಿದ್ದಾರೆ.