ಕುಡಿದ ಮತ್ತಿನಲ್ಲಿ, ನಾನು ಆಕಾಶದ ಕೆಳಗೆ ಭೂಮಿಯ ಮೇಲೆ ಇದ್ದೀನಿ ಬೇಗ ಬನ್ನಿ, ಶೃಂಗೇರಿಯಲ್ಲಿ ಗಲಾಟೆಯಾಗಿ ತುಂಬಾ ಪೆಟ್ಟಾಗಿದೆ ಎಂದು ಅಂಬುಲೆನ್ಸ್ಗೆ ಕರೆ ಮಾಡಿದ್ದಾನೆ. ಇದನ್ನು ನಂಬಿದ ಅಂಬುಲೆನ್ಸ್ ಸಿಬ್ಬಂದಿ ಬಾಳೆಹೊನ್ನೂರಿನಿಂದ 40 ಕಿ.ಮೀ ದೂರದಿಂದ ಶೃಂಗೇರಿಗೆ ಬಂದಿದ್ದಾರೆ.
ಈ ವೇಳೆ ಕುಡುಕ ನನಗೆ ಅಂಬುಲೆನ್ಸ್ ಬೇಡ, ತಾಕತ್ ಇದ್ರೆ ನನ್ನನ್ನ ಹಿಡಿರಿ ಎಂದು ಆಂಬುಲೆನ್ಸ್ ಸಿಬ್ಬಂದಿಗೆ ಅವಾಜ್ ಹಾಕಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಕುಡುಕನನ್ನು ಹಿಡಿಯಲು ಹರಸಾಹಸ ಪಟ್ಟಿದ್ದಾರೆ. ಬಳಿಕ ಸ್ಥಳೀಯರು ಅಲ್ಲೇ ವೈನ್ ಶಾಪ್ನಲ್ಲಿದ್ದ ಅಡಗಿಕೊಂಡಿದ್ದ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರ ಬಳಿ ಸ್ಥಳೀಯರು ಕರೆದುಕೊಂಡು ಹೋಗುತ್ತಿದ್ದಂತೆ, ಸರ್ ತಪ್ಪಾಯ್ತು ಬಿಡಿ ಸರ್ ಎಂದು ಗೋಗರೆದಿದ್ದಾನೆ.