– ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ಅಸಲಿ ರಹಸ್ಯ ಬಯಲು
ತಿರುವನಂತಪುರಂ: ಇತ್ತೀಚೆಗಷ್ಟೇ ತಿರುವನಂತಪುರಂನ ನೆಯ್ಯಟ್ಟಿಂಕರದಲ್ಲಿ (Neyyattinkara) ನಡೆದಿದ್ದ 1 ವರ್ಷದ ಮಗುವಿನ ಸಾವಿನ ಪ್ರಕರಣದಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. ಸೆಕ್ಸ್ ಗೆ ಅಡ್ಡಿಪಡಿಸಿದ್ದಕ್ಕೆ ತಂದೆಯೇ ಮಗುವನ್ನ ಕೊಲೆಗೈದಿರುವುದು ಗೊತ್ತಾಗಿದೆ.
ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಪತ್ನಿ ಹೇಳಿಕೆ
ಜನವರಿ 16 ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿ ತಮ್ಮ 1 ವರ್ಷದ ಮಗು ಇಹಾನ್ (ಅಪ್ಪು) ನನ್ನ ಆಸ್ಪತ್ರೆಗೆ ಕರೆತಂದಿದ್ದರು. ಬಿಸ್ಕೆಟ್, ದ್ರಾಕ್ಷಿ ತಿಂದ ಬಳಿಕ ಮಗು (Child) ಕುಸಿದು ಬಿದ್ದಿದೆ ಎಂದು ಇಬ್ಬರೂ ಹೇಳಿದ್ದರು. ಬಳಿಕ ತುರ್ತು ವಿಭಾಗದಲ್ಲಿ ಇಹಾನ್ನನ್ನ ಪರೀಕ್ಷಿಸಿದ ವೈದ್ಯರು ಅವನ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದನ್ನ ಪತ್ತೆಹಚ್ಚಿದ್ದರು. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಯಿತು. ಪೊಲೀಸರು ತನಿಖೆ
ಪ್ರಾಥಮಿಕ ವಿಚಾರಣೆ ಬಳಿಕ ದಂಪತಿಯನ್ನ ಮನೆಗೆ ಕಳಿಸಿದ್ದ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಹಾಗೂ ಫೊರೆನ್ಸಿಕ್ ರಿಪೋರ್ಟ್ ಬಂದ ಬಳಿಕ ಪುನಃ ವಿಚಾರಣೆಗೆ ಕರೆಸಿದರು. ಈ ಸಂದರ್ಭದಲ್ಲಿ ಪತ್ನಿ ನೀಡಿದ ಹೇಳಿಕೆ ಪ್ರಕರಣಕ್ಕೆ ಟ್ವಿಸ್ಟ್ ನೀಡಿತು.

ವರದಿ ಆಧರಿಸಿ ತನಿಖೆ ನಡೆಸಿದಾಗ ತಂದೆ ಶಿಜಿಲ್ ಸತ್ಯ ಬಾಯ್ಬಿಟ್ಟಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
