ಧರ್ಮಸ್ಥಳ:  ಶ್ರೀ  ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಅಕ್ಟೋಬರ್ 24 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಡಾ. ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ೨೪ರಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಇದನ್ನೂ ಓದಿ :  ಸ್ಟಾರ್‌ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣ್‌ವೀರ್ ಸಿಂಗ್ ಮಗಳ ಫೋಟೋ ರಿವೀಲ್

ಕಾರ್ಯಕ್ರಮದ ಪ್ರಯುಕ್ತ ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆ ಅವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕರಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು.

ಈ ಸಂದರ್ಭ ಕ್ಷೇತ್ರದ ಹಿರಿಯ ನೌಕರರ ಸನ್ಮಾನ ನಡೆಯಲಿದೆ. ಧರ್ಮಾಧಿಕಾರಿ ಡಾ. ಹೆಗ್ಗಡೆ ಅವರು ಹೊಸ ಯೋಜನೆಗಳನ್ನು ಪ್ರಕಟಿಸುವರು.1968 ರ .24 ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.