ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ| ಎಸ್.ಎಲ್. ಬೈರಪ್ಪ ಭೇಟಿ ನೀಡಿ, “ಭಾರತದ ಸನಾತನ ಧರ್ಮವನ್ನು ಉಳಿಸಿಕೊಳ್ಳುವಲ್ಲಿ ಈ ವಿದ್ಯಾಸಂಸ್ಥೆಯು ಬಹುತ್ತರವಾದ ಪಾತ್ರವನ್ನು ವಹಿಸಿದೆ. ಪಠ್ಯಪುಸ್ತಕ ಹೊರತಾದ ಜೀವನ ಶಿಕ್ಷಣವನ್ನು ಈ ವಿದ್ಯಾಕೇಂದ್ರದಲ್ಲಿ ನೀಡಲಾಗುತ್ತಿದೆ. ಕಲಿಕೆಗೆ ಬೇಕಾದುದು ಪೂರಕ ವಾತಾವರಣವೇ ಹೊರತು ಪಠ್ಯಕ್ರಮ ಅಲ್ಲ. ಅದು ಇಲ್ಲಿ ಸಾಕಾರಗೊಂಡಿದೆ” ಎಂದರು.
ಕಾರ್ಯಕ್ರಮದ ಮೊದಲಿಗೆ ವಿದ್ಯಾಕೇಂದ್ರದ ಎಲ್ಲಾ ಚಟುವಟಿಕೆ, ಮಿನಿ ಕ್ರೀಡೋತ್ಸವವನ್ನು ವೀಕ್ಷಿಸಿದರು.
ನಂತರ ಭಾರತ ಮಾತೆಗೆ ದೀಪಪ್ರಜ್ವಲನೆ ಮಾಡಿ ಪುಷ್ಪಾರ್ಚನೆ ಮಾಡಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕಸಂಘದಅಧ್ಯಕ್ಷ ಡಾ| ಪ್ರಭಾಕರ್ ಭಟ್ ಕಲ್ಲಡ್ಕ, ವೃತ್ತಿಯಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿರುವ ಸಾಹಿತಿ ಸಹನಾ ವಿಜಯ್ ಕುಮಾರ್, ಜ್ಯೋತಿಷ್ಯ ಶಾಸ್ತ್ರ ಡಾಕ್ಟರೇಟ್ ಪದವಿಯನ್ನು ಪಡೆದ ಡಾ| ರವಿ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಾಯಾಜಿ ಹಾಗೂ ಡಾ| ಕಮಲಾ ಪ್ರಬಾಕರ್ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಾದ ಸುಶ್ಮಿತಾ ಭಟ್ ಸ್ವಾಗತಿಸಿ, ಅಧ್ಯಾಪಕರಾದ ಜಿನ್ನಪ್ಪ ನಿರೂಪಿಸಿದರು.