ಪಣಂಬೂರು: ಪಣಂಬೂರು ಅಂತರಾಷ್ಟ್ರೀಯ ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದ್ದು ಡಿ.27ರಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿದರು. ಬಳಿಕ ಬೀಚ್ ಪ್ರವಾಸೋಧ್ಯಮಕ್ಕೆ ಸರಕಾರವು ಎಲ್ಲಾ ರೀತಿಯ ಸಹಕಾರ ನೀಡುವ ಬಗ್ಗೆ ಪ್ರವಾಸೋಧ್ಯಮ ಸಚಿವರಲ್ಲಿ ಮಾತುಕತೆ ನಡೆಸಲಾಗುವುದು ಎಂದರು.
ಈ ವೇಳೆ ಬೃಹತ್ ಅಲೆಗಳ ನಡುವೆ ತೇಲುವ ಸೇತುವೆಯಲ್ಲಿ ಪ್ರವಾಸಿಗರು ನಡೆದಾಡಿ ಸಂಭ್ರಮಿಸಿದರು. ಮಲ್ಪೆ ಬೀಚ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬೀಚ್ನಲ್ಲಿ ಇದೇ ಮೊದಲ ತೇಲುವ ಸೇತುವೆಯಾಗಿದೆ. ಪ್ರತೀ ವ್ಯಕ್ತಿಗೆ ರೂಪಾಯಿ 150 ದರ ವಿಧಿಸಲಾಗುತ್ತಿದ್ದು, ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲಾಗುತ್ತಿದೆ.