ಬಂಟ್ವಾಳ : ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಶಾಲೆಗಳು ಉಳಿಯಬೇಕಾದರೆ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುವುದು ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಪ್ರವೀಣ್ ಕುಮಾರ್ ಮುಗುಳಿ ಹೇಳಿದರು.  ಇದನ್ನೂ ಓದಿ :  ಕಲ್ಲಡ್ಕ ಶ್ರೀರಾಮ ಹಿ. ಪ್ರಾ.ಶಾಲೆಯಲ್ಲಿ ರೋಬೋಟಿಕ್ ಕೋಡಿಂಗ್ ತರಗತಿ ಉದ್ಘಾಟನೆ

ಅವರು ಶನಿವಾರ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ( ಎಲ್ ಕೆ ಜಿ )ಉದ್ಘಾಟಿಸಿ ಮಾತನಾಡಿದರು.

ಪೂರ್ವ ಪ್ರಾಥಮಿಕ ತರಗತಿಗಳಿಗೆ ದಾಖಲಾದ ಮಕ್ಕಳನ್ನು ಆಕರ್ಷಕ ಮೆರವಣಿಗೆ ಮೂಲಕ ಕರೆತಂದು ಆರತಿ ಬೆಳಗಿಸಿ ಪುಷ್ಪದಳ ಸಿಂಪಡಿಸಿ ನೂತನ ತರಗತಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ವಿಶೇಷ ಸಹಕಾರ ನೀಡಿದ ಮಹನೀಯರನ್ನು ಗುರುತಿಸಿ ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯರಾದ ರಾಮಚಂದ್ರ ಬನ್ನಿಂತಾಯ, ಭಾರತದ ಏಕೈಕ ಮಲ್ಟಿಪಲ್ ಇಂಡಿಯನ್ ಗ್ರಾಫ್ನಲ್ ಕಾರ್ ಚಾಂಪಿಯನ್ ಅಶ್ವಿನಿ ನಾಯ್ಕ್, ಪಂಚಾಯತ್ ಮಾಜಿ ಸದಸ್ಯರಾದ ಗುರುವಪ್ಪಗೌಡ, ಲೋಕನಾಥ್ ಕುಲಾಲ್ ನೈತಿಕ ಶಿಕ್ಷಣ ಬೋಧಕಿ ಶ್ರೀಮತಿ ಮುಕಾಂಬಿಕಾ ರಾವ್, ಗಣ್ಯರಾದ ರೋಟರಿ ಕ್ಲಬ್ ಬಂಟ್ವಾಳ ಸಿಟಿ ಇದರ ಸದಸ್ಯರಾದ ಶ್ರೀ ರಮೇಶ್ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಭವ್ಯ,ಮಾಜಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳಾದ ಶ್ರೀಮತಿ ಮಾಲತಿ ಹಾಗೂ ಶ್ರೀಮತಿ ಚಂದ್ರಿಕಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶೋಭಲತಾ ಬಿ ಸ್ವಾಗತಿಸಿ, ಕಲಾ ಶಿಕ್ಷಕ ಜಯರಾಮ್ ನಾವಡ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾಡಿ, ಎಲ್ ಕೆ ಜಿ ಶಿಕ್ಷಕಿ ಸುಮಾನ ವಂದಿಸಿದರು. ಸಹ ಶಿಕ್ಷಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ನಿಶ್ಮಿತ, ಅಶ್ವಿನಿ,ಇಂದಿರಾ ಮತ್ತು ಶಿಕ್ಷಕರಾದ ಮಹಮ್ಮದ್ ಅಖೀಲ್ ಸಹಕರಿಸಿದರು.  ಇದನ್ನೂ ಓದಿ : “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ವಿವಿಧ ಕಾಮಗಾರಿ ಉದ್ಘಾಟಿಸಿದ – ಸಿ.ಎಂ.