ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಗೊಳ್ತಮಜಲ್ ಬಿ. ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಗೋಳ್ತಮಜಲು ಗ್ರಾಮದ ನೆಟ್ಲ ಶ್ರೀ ನಿಟಿಲೇಶ್ವರ ದೇವಸ್ಥಾನದಲ್ಲಿ ನಡೆಸಲಾಯಿತು.

ಸ್ವಚ್ಛತಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಶೆಟ್ಟಿ ಉದ್ಘಾಟಿಸಿದರು. ದೇವಸ್ಥಾನದ ಮೆನೇಜರ್ ನವೀನ್ ಎನ್., ಪಂಚಾಯತ್ ಸದಸ್ಯರಾದ ಹರೀನಾಕ್ಷಿ, ಸವಿತಾ ಉಪಸ್ಥಿತರಿದ್ದರು. ಒಕ್ಕೂಟದ ಸದಸ್ಯರುಗಳು

ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ ಮಾಡಿದರು. ರೋಹಿಣಿ ಯನ್ ಸ್ವಾಗತಿಸಿ, ಸೇವಾಪ್ರತಿನಿಧಿ ಸುಕನ್ಯಾ ಪ್ರಾಸ್ತಾವಿಕ ಮಾಡಿ, ಪ್ರೇಮ ವಂದಿಸಿದರು. ಅರುಣಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.