ಅಹಮದಾಬಾದ್: ಗುಜರಾತ್‌ ವಡೋದರಾದ (Vadodara) ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ  ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ.

ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್  ಮತ್ತು ಸೌರಾಷ್ಟ್ರ  ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಇದನ್ನೂ ಓದಿ :  ಇಂದು ಭಾರತ್ ಬಂದ್ – ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನಗಳು ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.

45 ವರ್ಷದ ಹಳೆಯ ಸೇತುವೆ ಇದಾಗಿದ್ದು  ಬಹಳ ಹಿಂದಿನಿಂದಲೂ ಅಪಾಯಕಾರಿ ಸ್ಥಿತಿಯಲ್ಲಿತ್ತು. ಅದರ ಶಿಥಿಲಾವಸ್ಥೆಯ ಬಗ್ಗೆ ಸ್ಥಳೀಯರು ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರು. ತುರ್ತು ದುರಸ್ತಿ ಅಥವಾ ಹೊಸ ರಚನೆಗಾಗಿ ಮನವಿ ಮಾಡಿದ್ದರು ಎಂದು ವರದಿಯಾಗಿದೆ.