ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಹರಿಯಾಣ : ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Posted by Bantwala Isiri News | Mar 10, 2026 | ಬಂಟ್ವಾಳ | 0 |

ಹರಿಯಾಣ : ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

ಚಂಡೀಗಢ: ನಿರ್ಮಾಣ ಹಂತದ ಗೋಡೆ ಕುಸಿದು 7 ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ (Haryana) ಗುರುಗ್ರಾಮ್ (Gurugram) ಜಿಲ್ಲೆಯ ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಇಂದ್ರಜಿ ಸದಾ (32), ಭಾಗೀರಥ್ ಗೋಪಿ, ಛೋಟೆಲಾಲ್ ಸದಾ (37), ಶಿವಶಂಕರ್ (31), ಶಿವಕಾಂತ್ ಚೌಧರಿ (47) ಮತ್ತು ಮಂಗಾತ್ರಮ್ (32) ಎಂದು ಗುರುತಿಸಲಾಗಿದ್ದು, ಇನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ : ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

ಅಧಿಕಾರಿಗಳ ಮಾಹಿತಿ ಪ್ರಕಾರ, ಸೋಮವಾರ (ಮಾ.9) ರಾತ್ರಿ 7 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಸುಮಾರು 12-15 ಕಾರ್ಮಿಕರ ಗುಂಪು ಒಳಚರಂಡಿ ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗೋಡೆ ಕುಸಿದಿದ್ದು, ಕಾರ್ಮಿಕರು ಅವಶೇಷಗಳು ಹಾಗೂ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು. 9:30 ಸುಮಾರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದವು ಎಂದು ತಿಳಿಸಿದ್ದಾರೆ.

ಈವರೆಗೆ ಏಳು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದ್ದು, ಅವರ ಬಳಿಯಿದ್ದ ಗುರುತಿನ ಚೀಟಿ ಆಧಾರದ ಮೇಲೆ ಕಾರ್ಮಿಕರ ಮಾಹಿತಿ ಪತ್ತೆ ಹಚ್ಚಲಾಗಿದೆ. ಇನ್ನೂ ಗಂಭೀರವಾಗಿ ಗಾಯಗೊಂಡ ಐವರು ಕಾರ್ಮಿಕರನ್ನು ರಾಜಸ್ಥಾನದ ಭಿವಾಡಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಪೊಲೀಸರು ಗೋಡೆ ಕುಸಿತಕ್ಕೆ ಕಾರಣವೇನು ಎಂಬುವುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

Share:

Rate:

Previousಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ
Nextಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

18 March 2026

ಸಪ್ತಪದಿ ತುಳಿದ ಬ್ರಹ್ಮಗಂಟು ನಟಿ ಗೀತಾ ಭಾರತಿ ಭಟ್

ಸಪ್ತಪದಿ ತುಳಿದ ಬ್ರಹ್ಮಗಂಟು ನಟಿ ಗೀತಾ ಭಾರತಿ ಭಟ್

15 December 2025

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶ

9 August 2024

ಪವಿತ್ರ ಮಂತ್ರಾಕ್ಷತೆ ವಿತರಣೆ

ಪವಿತ್ರ ಮಂತ್ರಾಕ್ಷತೆ ವಿತರಣೆ

12 December 2023

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ
    ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವ
  • ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ 2026 ಆಚರಣೆ.
    ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ 2026 ಆಚರಣೆ.
  • ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆ ವಿದ್ಯಾಗಿರಿ ಬಂಟ್ವಾಳ, 2026-27 ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆ
    ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆ ವಿದ್ಯಾಗಿರಿ ಬಂಟ್ವಾಳ, 2026-27 ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆ
  • ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭ : ಆಮಂತ್ರಣ ಪತ್ರ ಬಿಡುಗಡೆ
    ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭ : ಆಮಂತ್ರಣ ಪತ್ರ ಬಿಡುಗಡೆ
  • ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಮಾಡೋದು ಹೇಗೆ- ಹಂತ ಹಂತದ ಮಾಹಿತಿ
    ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಮಾಡೋದು ಹೇಗೆ- ಹಂತ ಹಂತದ ಮಾಹಿತಿ
  • ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಬರಲಿದೆ PM Kisan ಯೋಜನೆಯ 2 ಸಾವಿರ ರೂಪಾಯಿ ಹಣ
    ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಬರಲಿದೆ PM Kisan ಯೋಜನೆಯ 2 ಸಾವಿರ ರೂಪಾಯಿ ಹಣ
  • ಡ್ರಗ್ಸ್‌ ನೀಡಿ ಮಹಿಳೆ ಮೇಲೆ ಅತ್ಯಾಚಾರ, ಬಲವಂತದ ಮತಾಂತರ; ಇಬ್ಬರು ಅರೆಸ್ಟ್‌
    ಡ್ರಗ್ಸ್‌ ನೀಡಿ ಮಹಿಳೆ ಮೇಲೆ ಅತ್ಯಾಚಾರ, ಬಲವಂತದ ಮತಾಂತರ; ಇಬ್ಬರು ಅರೆಸ್ಟ್‌
  • Tumakuru | ತೋಟಕ್ಕೆ ವಾಕಿಂಗ್ ತೆರಳಿದ್ದ ವೃದ್ಧೆಯ ಭೀಕರ ಕೊಲೆ
    Tumakuru | ತೋಟಕ್ಕೆ ವಾಕಿಂಗ್ ತೆರಳಿದ್ದ ವೃದ್ಧೆಯ ಭೀಕರ ಕೊಲೆ
  • ದ.ಕ.ಜಿ.ಪಂ. ಕಿ.ಪ್ರಾ. ಶಾಲೆ ಏಮಾಜೆ : ಸಂಭ್ರಮದ ‘ಸೃಜನೋತ್ಸವ – 2026’ ವಿನೂತನ ಕಾರ್ಯಕ್ರಮ
    ದ.ಕ.ಜಿ.ಪಂ. ಕಿ.ಪ್ರಾ. ಶಾಲೆ ಏಮಾಜೆ : ಸಂಭ್ರಮದ ‘ಸೃಜನೋತ್ಸವ – 2026’ ವಿನೂತನ ಕಾರ್ಯಕ್ರಮ
  • ಪರಿಸರದ ನಾಶಕ್ಕೆ ಮಾನವನ ಆಸೆ, ದುರಾಸೆಗಳೆ ಕಾರಣ – ಅನಿಲ್ ಪಂಡಿ
    ಪರಿಸರದ ನಾಶಕ್ಕೆ ಮಾನವನ ಆಸೆ, ದುರಾಸೆಗಳೆ ಕಾರಣ – ಅನಿಲ್ ಪಂಡಿ

Designed by Elegant Themes | Powered by WordPress

error: Content is protected !!