ಬಂಟ್ವಾಳ ತಾಲೂಕು ಮಟ್ಟದ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ
ಬಂಟ್ವಾಳ . ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿ ಇದೆ, ಸರಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣದಲ್ಲೂ ಯಾವ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ, ಮಕ್ಕಳ ಮನಸ್ಸನ್ನು ಮುಟ್ಟುವ ಕೆಲಸ ನಮ್ಮದಾಗಬೇಕು ಎಂಬುದಾಗಿ ಬಂಟ್ವಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ. ಜಿ. ಹೇಳಿದರು.
ಅವರು ಸೋಮವಾರ ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿ 2025-26 ನೇ ಶೈಕ್ಷಣಿಕ ವರ್ಷದ ತಾಲೂಕು ಮಟ್ಟದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ, ಬಂಟ್ವಾಳ ನಗರ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹೇಳಿದರು.ಶಾಲಾ ಹಿರಿಯ ವಿದ್ಯಾರ್ಥಿ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹಾಗೂ ವಿಟ್ಲ ಗ್ರಾಮೀಣ ಬ್ಯಾಂಕಿನ ನಿರ್ದೇಶಕ ವಿಶ್ವನಾಥ.ಎಮ್ , ಮಜಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಈಶ್ವರ ಭಟ್ ರಾಕೋಡ್ ,ಬಂಟ್ವಾಳ ತಾಲೂಕಿನ ಕಲ್ಲಡ್ಕ ಕ್ಲಸ್ಟರ್ ಇದರ ಶಿಕ್ಷಣ ಸಂಯೋಜಕಿ ಪ್ರತಿಮಾ ಉಪಸ್ಥಿತರಿದ್ದರು.

ಗುಬ್ಬಚ್ಚಿ ಗೂಡು ಕಾರ್ಯಕ್ರಮದ ರೂವಾರಿಗಳಾದ ರಮ್ಯಾ ಹಾಗೂ ನಿತ್ಯಾನಂದ ಶೆಟ್ಟಿ ದಂಪತಿಗಳು ವಿದ್ಯಾರ್ಥಿಗಳಿಗೆ ಕಾರ್ಟೂನ್ ನೆಟ್ವರ್ಕ್ ಗೊಂಬೆ ಮುಖವಾಡದೊಂದಿಗೆ ಮಕ್ಕಳನ್ನು ಆಕರ್ಷಿಸಿದರು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅಭಿಯಾನ ನಿರ್ಮಾಣ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಸಹಕರಿಸುವಂತೆ “ಅಕ್ಷಯ ಬುಟ್ಟಿ’ ಎನ್ನುವ ವಿನೂತನ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಉತ್ತಮ ಹಾಗೂ ಆರೋಗ್ಯಕರ ಕುಡಿಯುವ ನೀರಿನ ವ್ಯವಸ್ಥೆಗಾಗಿ ಯುವ ಸೇವಾಪಥ ಕಡೇಶಿವಾಲಯ ಇವರ ವತಿಯಿಂದ ನೀಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ಧನ ಪೂಜಾರಿ ನಾರುಕೋಡಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವನಿತಾ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ವಿಶೇಷ ಸಂಪನ್ಮೂಲ ವ್ಯಕ್ತಿ ರವೀಂದ್ರ, ಮಾತೃಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ರಮೇಶ್ ಗೌಡ ಮೈರ, ಕಲ್ಲಡ್ಕ ಮತ್ತು ಕಂಬಳಬೆಟ್ಟು ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್ಸ್ ನ ಮಾಲಕ ಮೊಹಮದ್ ಶರೀಫ್, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿ, ಬಂಟ್ವಾಳ ತಾಲೂಕಿನ ಶಿಕ್ಷಣ ಸಂಯೋಜಕಿ ಪ್ರತಿಮಾ ಸ್ವಾಗತಿಸಿ, ಮಜಿಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ವಂದಿಸಿದರು. ಶಿಕ್ಷಕಿ ಸಂಗೀತ ಶಮ೯ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.