ಬಾಗಲಕೋಟೆ ಜಿಲ್ಲಾ‌ ಪೊಲೀಸ್ ವತಿಯಿಂದ ನವನಗರದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಪೊಲೀಸ್ ಸಮುದಾಯ ಭವನದ ‘ಧಾತ್ರಿ ಮಂಗಲ ಭವನ ಮತ್ತು ಉತ್ಕರ್ಷ ಪೊಲೀಸ್ ನಿವಾಸ’ ಕಟ್ಟಡಗಳನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ್‌   ಉದ್ಘಾಟಿಸಿದರು.   ಇದನ್ನೂ ಓದಿ :  ನೋಡನೋಡುತ್ತಲೇ ಏಕಾಏಕಿ ಹೊತ್ತಿ ಉರಿದ ಕಾರು – ಅದೃಷ್ಟವಶಾತ್ ಚಾಲಕ ಪಾರು
ಈ ಸಂದರ್ಭದಲ್ಲಿ ಅಬಕಾರಿ ಸಚಿವರು ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಶಾಸಕರಾದ ಹೆಚ್.ವೈ.ಮೇಟಿ, ಭೀಮಸೇನ್ ಚಿಮ್ಮನಕಟ್ಟಿ, ಹಣಮಂತ ನಿರಾಣಿ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡಗೆ, ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋಡ್, ಬಾಗಲಕೋಟೆ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.