ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನ ಮಂದಿರದಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ವಿವಿಧ ಕ್ಷೇತ್ರದಲ್ಲಿ ಸಾಧನೆೆ ಮಾಡಿದ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
”ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾಗಿರುವ ಡಾ| ಪ್ರಭಾಕರ ಭಟ್‌ ಕಲ್ಲಡ್ಕಅವರು ಅಧ್ಯಕ್ಷೀಯ ನುಡಿಗಳಲ್ಲಿ “ಪ್ರತಿಯೊಂದು ವಿದ್ಯಾರ್ಥಿಗಳಲ್ಲಿ ಪ್ರತಿಭೆಇದೆ.ಅದನ್ನು ಹೊರಗೆ ತೆಗೆಯುವ ಪ್ರಯತ್ನ.ಅದಕೋಸ್ಕರ ನಮ್ಮ ಸಂಸ್ಥೆಯಲ್ಲಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಅದರಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೀರಿ. ಮುಂದಿನ ದಿನಗಳಲ್ಲಿ ಸ್ಪರ್ಧೆಗಳನ್ನು ನಡೆಸುವಾಗ ತಯಾರಿಯಾಗಿ ಬನ್ನಿ, ಮನಸ್ಸಿಟ್ಟು ಭಾಗವಹಿಸಿ ಬಹುಮಾನವನ್ನುಗೆಲ್ಲಿ“ ಎಂದು ಮಕ್ಕಳಿಗೆ ಶುಭಹಾರೈಸಿದರು.

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವೇದವ್ಯಾಸಧ್ಯಾನಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ೧ ರಿಂದ ೭ನೇ ತರಗತಿಯವರೆಗೆ೨೦೨೪-೨೫ರ ಶೈಕ್ಷಣಿಕ ವರ್ಷದಲ್ಲಿ ಬೌದ್ಧಿಕ ಸ್ಪರ್ಧೆ, ಕ್ರೀಡೆಹಾಗೂ  ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟçಮಟ್ಟದವಿವಿಧಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ – ಪುರಸ್ಕಾರ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದಅಧ್ಯಕ್ಷ ನಿಶ್ಚಲ್ ಜಿ. ಶೆಟ್ಟಿ ಕಲ್ಲಾಡಿ, ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು, ಇರಾ ಅಂಚೆ ಪಾಲಕ ಸುರೇಶ್‌ರೈ, ಕಲ್ಲಡ್ಕ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್‌ನ ವ್ಯವಸ್ಥಾಪಕ ಮಂಜುಕುಮಾರ್, ಕಲ್ಲಡ್ಕ ಸಾಲಿಯಾನ್ ಸರ್ವಿಸಸ್‌ನ ಮಾಲಕರು ಚಂದ್ರಶೇಖರ ಸಾಲಿಯಾನ್, ಸಹಕಾರಿ ಪ್ರಕೋಷ್ಟದ ಬಂಟ್ವಾಳ ತಾಲೂಕು ಸಂಚಾಲಕ ಜಯರಾಮರೈ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್‌ ಎನ್, ಶ್ರೀರಾಮ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಕೃಷ್ಣ ಪ್ರಸಾದ್‌ ಕಾಯರ್‌ಕಟ್ಟೆ,  ಮಾತೃಸ್ವರೂಪಿಣಿ ಡಾ| ಕಮಲಾ ಪ್ರಭಾಕರ್ ಭಟ್‌ ಹಾಗೂ ಮುಖ್ಯೋಪಾಧ್ಯಾಯ ರವಿರಾಜ್‌ ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಪ್ರಾಪ್ತಿರೈನಿರೂಪಿಸಿ, ಸುಶ್ಮಿತಾ ಭಟ್‌ಸ್ವಾಗತಿಸಿ, ನಿನಾದ್ ಕೈರಂಗಳ ವಂದಿಸಿದರು.