ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

Posted by Bantwala Isiri News | Jul 13, 2025 | ಬಂಟ್ವಾಳ | 0 |

ಕಲ್ಯಾಣ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸ್ಥಾಪನೆಯಾಗುತ್ತಿದೆ ತಾಯಿ ಎದೆಹಾಲಿನ ಬ್ಯಾಂಕ್

– ಅವಧಿಪೂರ್ವ ಜನನ, ಅಪೌಷ್ಟಿಕತೆ ಹಾಗೂ ಕಡಿಮೆ ತೂಕದ ಮಕ್ಕಳಿಗೆ ಅನುಕೂಲ
– 75 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿದೆ ಅಮೃತಧಾರೆ

ಬಳ್ಳಾರಿ: ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಆನಾರೋಗ್ಯ ಪೀಡಿತ ಶಿಶುಗಳಿಗೆ ಎದುರಾಗುವ ತಾಯಿಯ ಎದೆಹಾಲಿನ (Breast Milk) ಕೊರತೆ ನೀಗಿಸಲು ಅಮೃತಧಾರೆ (Amruthadhare) ಹೆಸರಿನಡಿ ಕಲ್ಯಾಣ ಕರ್ನಾಟಕ (Kalyana Karnataka) ಭಾಗದಲ್ಲಿ ಮೊಟ್ಟ ಮೊದಲ ಬಾರಿ ಬಳ್ಳಾರಿ (Ballari) ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದಲ್ಲಿ ಹಾಲಿನ ಬ್ಯಾಂಕ್‌ ಸ್ಥಾಪಿಸಲು ಭರದ ಸಿದ್ಧತೆ ನಡೆದಿದೆ.

ಬಳ್ಳಾರಿ ವಿಮ್ಸ್‌ನಲ್ಲಿ ನಿತ್ಯ 25-30 ಹೆರಿಗೆಗಳಾಗುತ್ತಿದ್ದು, ತಾಯಿ ಮತ್ತು ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ. ಹಲವು ಸೌಲಭ್ಯಗಳ ಮಧ್ಯೆ ಕಡಿಮೆ ತೂಕ, ಅವಧಿ ಪೂರ್ವ ಹಾಗೂ ಅನಾರೋಗ್ಯ ಶಿಶುಗಳ ಜನನ ಸಾಮಾನ್ಯವಾಗಿದೆ. ಇಂಥ ಮಕ್ಕಳು ತಾಯಿಯ ಎದೆಹಾಲಿನ ಕೊರತೆ ಎದುರಿಸುವುದನ್ನು ತಡೆಯುವ ದೂರದೃಷ್ಟಿಯಿಂದ ಹಾಲಿನ ಬ್ಯಾಂಕ್ ಸ್ಥಾಪನೆಗೆ ಯೋಜಿಸಲಾಗಿದೆ. ಇದನ್ನೂ ಓದಿ :  ಜು.14 ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ
ಬಳ್ಳಾರಿ ಮಹಾನಗರ ಪಾಲಿಕೆಯಿಂದ 25 ಲಕ್ಷ ರೂ. ಹಾಗೂ ಜಿಲ್ಲಾಡಳಿತದ 50 ಲಕ್ಷ ರೂ. ಸೇರಿ ಒಟ್ಟು 75 ಲಕ್ಷ ರೂ. ಅನುದಾನದಲ್ಲಿ ಹಾಲಿನ ಬ್ಯಾಂಕ್‌ (Breast Milk Bank) ನಿರ್ಮಾಣ ಕೈಗೊಂಡಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಬ್ಯಾಂಕ್ ಒಟ್ಟು 510 ಬಾಟಲ್‌ಗಳಲ್ಲಿ ಹಾಲು ಸಂಗ್ರಹ ಸಾಮರ್ಥ್ಯ ಹೊಂದಿದೆ
ಕಲ್ಯಾಣ ಕರ್ನಾಟಕದಲ್ಲೇ ಹೆಚ್ಚು ಅಪೌಷ್ಟಿಕತೆ, ಅವಧಿ ಪೂರ್ವ ಹೆರಿಗೆ, ಕಡಿಮೆ ತೂಕ ಹಾಗೂ ಅನಾರೋಗ್ಯ ಪೀಡಿತ ಮಕ್ಕಳ ಜನನ ಸೇರಿ ಇತರ ಕಾರಣಗಳಿಂದ ಈ ಭಾಗದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ತೀವ್ರವಾಗಿ ಕಾಡುತ್ತದೆ. ಹೆರಿಗೆ ಸಂದರ್ಭದಲ್ಲಿ ಮಕ್ಕಳಿಗೆ ಎದುರಾಗುವ ತಾಯಿ ಹಾಲಿನ ಕೊರತೆ ನೀಗಿಸಲು ರಾಜ್ಯದಲ್ಲಿರುವ ಬೆರಳೆಣಿಕೆಯಷ್ಟು ಹಾಲಿನ ಬ್ಯಾಂಕ್‌ ಗಳಿಗೆ ತೆರಳಲಾಗದ ಪಾಲಕರು ಹಸುವಿನ ಹಾಲು, ಗಂಜಿಯ ಮೊರೆ ಹೋಗುವುದು ಸಾಮಾನ್ಯವಾಗಿದೆ.

ತಾಯಿ ಹಾಲಿನ ದಾನಕ್ಕೂ ಅವಕಾಶ

ಹಾಲುಣಿಸುವ ಮಹಿಳೆಯರು ತಮ್ಮ ಹೆಚ್ಚುವರಿ ಹಾಲನ್ನು ದಾನ ಮಾಡಲು ಸಿದ್ಧರಿದ್ದರೆ ಈ ಬ್ಯಾಂಕ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಜನಿಸಿದ ಮಗು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರೆ ಅಥವಾ ಅಸುನೀಗಿದರೆ ಅಂತಹ ತಾಯಿ ಹಾಲನ್ನು ದಾನ ಮಾಡಬಹುದಾಗಿದೆ. ಹೀಗೆ ಸಂಗ್ರಹಿಸಿದ ಹಾಲನ್ನು ಸುರಕ್ಷಿತವಾಗಿ ಇರಿಸಲು ವಿಮ್ಸ್‌ನಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Share:

Rate:

Previousಜು.14 ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಗಿಡ ನಾಟಿ ಕಾರ್ಯಕ್ರಮ
Nextಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ವರಲಕ್ಷ್ಮೀ ಮಹಾಪೂಜೆ

ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ವರಲಕ್ಷ್ಮೀ ಮಹಾಪೂಜೆ

9 August 2025

ಯು.ಎ.ಇ. ಭೇಟಿಗೆ ಮುನ್ನ ಭಾರತೀಯ ವಲಸಿಗ ಸಮುದಾಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಯು.ಎ.ಇ. ಭೇಟಿಗೆ ಮುನ್ನ ಭಾರತೀಯ ವಲಸಿಗ ಸಮುದಾಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

13 February 2024

ಲಯನ್ಸ್‌ ಕ್ಲಬ್‌ ಅಮ್ಟೂರು ಇದರ ವತಿಯಿಂದ  ಕುರ್ಚಿ ಹಾಗೂ ಟೇಬಲ್‌ ವಿತರಣೆ

ಲಯನ್ಸ್‌ ಕ್ಲಬ್‌ ಅಮ್ಟೂರು ಇದರ ವತಿಯಿಂದ ಕುರ್ಚಿ ಹಾಗೂ ಟೇಬಲ್‌ ವಿತರಣೆ

31 July 2024

ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಸಿ.ಎಂ.ಸಿದ್ಧರಾಮಯ್ಯ ಅಭಿನಂದನೆ

ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಸಿ.ಎಂ.ಸಿದ್ಧರಾಮಯ್ಯ ಅಭಿನಂದನೆ

7 May 2025

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
    ಕಡೇಶಿವಾಲಯ ಗ್ರಾಮದ ಬದಿಗುಡ್ಡೆ ದೈವಸ್ಥಾನದ ಸಂಪರ್ಕ ರಸ್ತೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅನುದಾನದಡಿ 5 ಲಕ್ಷ ಮೊತ್ತದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
  • ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
    ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ
  • ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
    ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ
  • ಪ್ರಧಾನಮಂತ್ರಿ  ಅವರನ್ನು ಭೇಟಿ ಮಾಡಿದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಗಳು
    ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಟ್ರಸ್ಟಿಗಳು
  • ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ
    ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ
  • ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ  ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಬಲಿ
    ಶಿವಮೊಗ್ಗ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಬಲಿ
  • Home Delivery Death: ಮನೆಯಲ್ಲೇ 7ನೇ ಹೆರಿಗೆ, ತಾಯಿ ಸಾವು! ಅಕ್ಯುಪಂಕ್ಚರ್ ಚಿಕಿತ್ಸಕ ಪತಿ ವಿರುದ್ಧ ಕೇಸ್
    Home Delivery Death: ಮನೆಯಲ್ಲೇ 7ನೇ ಹೆರಿಗೆ, ತಾಯಿ ಸಾವು! ಅಕ್ಯುಪಂಕ್ಚರ್ ಚಿಕಿತ್ಸಕ ಪತಿ ವಿರುದ್ಧ ಕೇಸ್
  • ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ
    ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು – ಗ್ರಾಮಸ್ಥರಿಂದ ಲಾಕಪ್‌ ಡೆತ್ ಆರೋಪ, ಠಾಣೆಗೆ ಬೀಗ ಜಡಿದು ಪ್ರತಿಭಟನೆ
  • ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ
    ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ
  • ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ
    ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Designed by Elegant Themes | Powered by WordPress

error: Content is protected !!