ಬಂಟ್ವಾಳ ಎಸ್ವಿಎಸ್ ಪದವಿ ಪೂರ್ವ ಕಾಲೇಜು
ಬಂಟ್ವಾಳ: ಕನ್ನಡ ನಾಡು ಕನ್ನಡಿಗರಿಗೆ ಬದುಕಲು ಆಶ್ರಯ ನೀಡಿದ ಸಂಸ್ಕೃತಿಗಳ ನೆಲೆಯಾಗಿದ್ದು, ಕನ್ನಡ ಭಾಷೆ ಹಾಗೂ ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಪ್ರಯತ್ನ ಯುವಜನತೆಯಿಂದ ಆಗಬೇಕು, ಆಗ ಮಾತ್ರ ಅಖಂಡ ಕರ್ನಾಟಕದ ಕನಸು ನನಸಾಗುವುದು ಎಂದು ಎಸ್.ವಿ.ಎಸ್. ಇಂಗ್ಲೀಷ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಚೈತ್ರಾ ಶೆಟ್ಟಿ ಹೇಳಿದರು.
ಅವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ನಡೆದ ಕನ್ನಡ ಕಲರವ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇದನ್ನು ಒದಿ ; ನಟೋರಿಯಸ್ ಕಳ್ಳ ಅರೆಸ್ಟ್ – 22.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಸುದರ್ಶನ್.ಬಿ ಮಾತನಾಡಿ, ಮನುಷ್ಯನ ವ್ಯಾವಹಾರಿಕ ಜೀವನಕ್ಕೆ ಎಲ್ಲಾ ಭಾಷೆಗಳು ಬೇಕು. ಆದರೆ ನಮ್ಮ ಕನ್ನಡ ಭಾಷೆಯನ್ನು ಕೈಬಿಡಬಾರದು. ಎಲ್ಲಾ ಭಾಷೆಗಳನ್ನು ಗೌರವಿಸುವುದರೊಂದಿಗೆ ಕನ್ನಡ ಭಾಷೆಯನ್ನು ಪ್ರೀತಿಸಬೇಕು ಎಂದು ತಿಳಿಸಿದರು.
ಕನ್ನಡ ಸಂಘದ ಸಂಯೋಜಕ ಶಶಿಧರ್ ಎಸ್. ಅತಿಥಿ ಗಣ್ಯರನ್ನು ಪರಿಚಯಿಸಿ, ವಿದ್ಯಾರ್ಥಿ ರಕ್ಷಿತ್ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ತನ್ವಿ ವಂದಿಸಿ, ರಕ್ಷಾ ಕಾರ್ಯಕ್ರಮ ನಿರೂಪಿಸಿದರು.
