ಕಾಪು ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ “ಕಿಶೋರ ಯಕ್ಷಗಾನ ಸಂಭ್ರಮ – 2023” ಇದರ ಸಮಾರೋಪ ಸಮಾರಂಭ ಶಿರ್ವಾ ಮಹಿಳಾ ಸೌಧದಲ್ಲಿ ಶಾಸಕರು, ಕಾಪು ಪ್ರದರ್ಶನ ಸಂಘಟನಾ ಸಮಿತಿ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಮತ್ತು ಶಿರ್ವಪ್ರದರ್ಶನ ಸಂಘಟನಾ ಸಮಿತಿ ಆಶ್ರಯದಲ್ಲಿ ಆಯೋಜಿಸಲಾದ ಈ “ಕಿಶೋರ ಯಕ್ಷಗಾನ – 2023” ಶಿರ್ವಾ ಮಹಿಳಾ ಸೌಧದ ಬಳಿ ಡಿ.25 ರಿಂದ ಡಿ.29 ರ ವರೆಗೆ ಸಂಜೆ 5.30 ರಿಂದ ರಾತ್ರಿ 9.00 ರ ವರೆಗೆ ದಿನಕ್ಕೆ ಎರಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಎರಡು ಪ್ರಸಂಗಗಳಂತೆ ನಡೆಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಲಾಪೋಷಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಶಿರ್ವ ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಬಬಿತಾ ಜೆ.ಅರಸ, ಮಂದಾರ ಹೋಟೆಲ್ ನ ಮನೋಹರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ರಮಾನಾಥ ಪಾಟ್ಕರ್, ರತ್ನಾಕರ ರಾವ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಶಿರ್ವ ಪ್ರದರ್ಶನಾ ಸಂಘಟನಾ ಸಮಿತಿ ಸಂಯೋಜಕ ವಿ.ಜಿ ಶೆಟ್ಟಿ, ಕೋಶಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.