ಬೆಂಗಳೂರು: ಕೊರಗಜ್ಜ ಸಿನಿಮಾ ತಂಡವು  ಗೃಹಸಚಿವರಾದ ಡಾ| ಜಿ.ಪರಮೇಶ್ವರ್‌ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಕೊರಗಜ್ಜ ಸಿನಿಮಾ ಕುರಿತಂತೆ ಚರ್ಚಿಸಿದರು.
ನಮ್ಮ ಪುರಾತನ ಸಂಸ್ಕೃತಿ ಮತ್ತು ಕಲೆಯನ್ನು ಕೊರಗಜ್ಜ ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷದ ವಿಷಯ. ಈ ರೀತಿಯ ಚಿತ್ರಗಳು ಹೆಚ್ಚು ಮೂಡಿ ಬರಲಿ. ಕೊರಗಜ್ಜ ಸಿನಿಮಾ ಮತ್ತು ಇಡೀ ಚಿತ್ರತಂಡಕ್ಕೆ ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ :ಸರ್ಕಾರದ ಸಕಲ ಗೌರವಗಳೊಂದಿಗೆ ನಡೆದ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ
ಈ‌ ಸಂದರ್ಭದಲ್ಲಿ ನಿರ್ದೇಶಕ ಸುಧೀರ್ ಅತ್ತಾವರ, ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಮುಂತಾದವರು ಇದ್ದರು.