ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Posted by Bantwala Isiri News | Dec 4, 2025 | ಬಂಟ್ವಾಳ | 0 |

ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌  ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. .

ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ವ್ಯಾಪಕ ವಿಳಂಬ ಮತ್ತು ರದ್ದತಿಯಿಂದಾಗಿ ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ :4 ಡಿಸೆಂಬರ್‌ Indian Navy Day (ಭಾರತೀಯ ನೌಕಾಪಡೆ ದಿನ)

ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ನಲ್ಲೂ ತಾಂತ್ರಿಕ ದೋಷ ಉಂಟಾಗಿರುವ ಪರಿಣಾಮ 73 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ನಿನ್ನೆ 43 ವಿಮಾನಗಳ ಹಾರಾಟ ರದ್ದುಗೊಳಿಸಿದ್ದ ಇಂಡಿಗೋ ಇಂದು 73 ವಿಮಾನ ಹಾರಾಟ ರದ್ದುಗೊಳಿಸಿದೆ.

ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿಗಳ ಹಿಂದಿನ ಕಾರಣಗಳನ್ನ ವಿವರಿಸುವಂತೆ ಮತ್ತು ಪರಿಸ್ಥಿತಿ ಸುಧಾರಿಸಲು ಒಂದು ಯೋಜನೆ ನೀಡುವಂತೆ ಡಿಜಿಸಿಎ (DGCA) ಇಂಡಿಗೋಗೆ ಸೂಚಿಸಿದೆ. ಅಲ್ಲದೇ ಈ ಕುರಿತು ಇಂದು ಮಧ್ಯಾಹ್ನ ನಡೆಯಲಿರುವ ಉನ್ನತ ಮಟ್ಟದ ಸಭೆಗೆ ಇಂಡಿಗೋ ಅಧಿಕಾರಿಗಳಿಗೆ ಬುಲಾವ್‌ ನೀಡಿದೆ.

ಉಂಟಾಗಿರುವ ಸಮಸ್ಯೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಇಂಡಿಗೋ ಸಂಸ್ಥೆಯು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸುವ ಭರವಸೆ ನೀಡಿದೆ. ಜೊತೆಗೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದೆ.

ಸಣ್ಣಪುಟ್ಟ ತಾಂತ್ರಿಕ ದೋಷಗಳು, ಚಳಿಗಾಲದ ವೇಳಾಪಟ್ಟಿಯಲ್ಲಿನ ಹೊಂದಾಣಿಕೆ, ಪ್ರತಿಕೂಲ ಹವಾಮಾನ ಪರಿಸ್ಥಿತಿ, ವಿಮಾನ ನಿಲ್ದಾಣದಲ್ಲಿನ ದಟ್ಟಣೆ ಹಾಗೂ ನವೀಕರಿಸಿದ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಅನುಷ್ಠಾನ ಸೇರಿದಂತೆ ಅನಿರೀಕ್ಷಿತ ಕಾರ್ಯಾಚರಣೆ ಸವಾಲುಗಳು ಅಡಚಣೆಗೆ ಕಾರಣವಾಗಿದೆ. ಇದನ್ನ ನಾವು ಊಹಿಸಿಯೂ ಇರಲಿಲ್ಲ. ಹಾಗಾಗಿ ಸಿಬ್ಬಂದಿ ಲಭ್ಯತೆಗೆ ಅನುಗುಣವಾಗಿ ಕಾರ್ಯಾಚರಣೆ ಸ್ಥಿರಗೊಳಿಸಲು ಕೆಲ ವಿಮಾನಗಳ ವೇಳಾಪಟ್ಟಿ ಬದಲಾವಣೆ ಮತ್ತು ರದ್ದತಿ ಆಗಿದೆ ಎಂದು ತಿಳಿಸಿದೆ.

Share:

Rate:

Previous4 ಡಿಸೆಂಬರ್‌ Indian Navy Day (ಭಾರತೀಯ ನೌಕಾಪಡೆ ದಿನ)
Nextವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ಮಹಿಳಾ ನೌಕರರ ಸಮ್ಮೇಳನ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಛಾಪು ಮೂಡಿಸುತ್ತಿರುವ ಸ್ತ್ರೀ ಕುಲವನ್ನು ಗೌರವಿಸಬೇಕು- ಬಿ.ವೈ.ವಿಜಯೇಂದ್ರ

ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಛಾಪು ಮೂಡಿಸುತ್ತಿರುವ ಸ್ತ್ರೀ ಕುಲವನ್ನು ಗೌರವಿಸಬೇಕು- ಬಿ.ವೈ.ವಿಜಯೇಂದ್ರ

8 March 2025

ನಾರಾಯಣಗುರುಗಳು ಧಾರ್ಮಿಕ ತಳಹದಿಯಲ್ಲಿ ಸಮಾಜಿಕ ಸುಧಾರಣೆ ಸಾಧ್ಯವಾಗಿಸಿದರು – ದಿನೇಶ್ ಸುವರ್ಣ ರಾಯಿ

ನಾರಾಯಣಗುರುಗಳು ಧಾರ್ಮಿಕ ತಳಹದಿಯಲ್ಲಿ ಸಮಾಜಿಕ ಸುಧಾರಣೆ ಸಾಧ್ಯವಾಗಿಸಿದರು – ದಿನೇಶ್ ಸುವರ್ಣ ರಾಯಿ

14 February 2025

ಜ.21 ಬಿ.ಸಿ.ರೋಡು ಕುಲಾಲ ಸುಧಾರಕ ಸಂಘ ಆಶ್ರಯದಲ್ಲಿ ಸಾಂಸ್ಕೃತಿಕ ಸಂಭ್ರಮ

ಜ.21 ಬಿ.ಸಿ.ರೋಡು ಕುಲಾಲ ಸುಧಾರಕ ಸಂಘ ಆಶ್ರಯದಲ್ಲಿ ಸಾಂಸ್ಕೃತಿಕ ಸಂಭ್ರಮ

17 January 2024

ಶರತ್ ಮಡಿವಾಳರ ಪುಣ್ಯಸ್ಮರಣೆ ಹಾಗೂ ನುಡಿನಮನ

ಶರತ್ ಮಡಿವಾಳರ ಪುಣ್ಯಸ್ಮರಣೆ ಹಾಗೂ ನುಡಿನಮನ

7 July 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ – ಸಿ.ಎಂ. ಸಿದ್ದರಾಮಯ್ಯ
    ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ಕೊಡುತ್ತಾ ಬಂದಿದೆ – ಸಿ.ಎಂ. ಸಿದ್ದರಾಮಯ್ಯ
  • ಬೆಟ್ಟಿಂಗ್ (Betting) ಹುಚ್ಚಿನಿಂದ 25 ಲಕ್ಷ ರೂಪಾಯಿ ಸಾಲ- ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
    ಬೆಟ್ಟಿಂಗ್ (Betting) ಹುಚ್ಚಿನಿಂದ 25 ಲಕ್ಷ ರೂಪಾಯಿ ಸಾಲ- ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
  • Narikombu- PaneMangalore ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    Narikombu- PaneMangalore ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
  • ತುಮಕೂರಿನ ವಿದ್ಯಾರ್ಥಿನಿಯರಾದ ಅದಿತಿ .ಜಿ ಮತ್ತು ಪ್ರೋಕ್ಷ ಅವರನ್ನು ಅಭಿನಂದಿಸಿದ -‌ ಗೃಹ ಸಚಿವ ಜಿ.ಪರಮೇಶ್ವರ್
    ತುಮಕೂರಿನ ವಿದ್ಯಾರ್ಥಿನಿಯರಾದ ಅದಿತಿ .ಜಿ ಮತ್ತು ಪ್ರೋಕ್ಷ ಅವರನ್ನು ಅಭಿನಂದಿಸಿದ -‌ ಗೃಹ ಸಚಿವ ಜಿ.ಪರಮೇಶ್ವರ್
  • ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
    ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
  • ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ – ಯಾಶಿರ್ ಕಲ್ಲಡ್ಕ
    ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ – ಯಾಶಿರ್ ಕಲ್ಲಡ್ಕ
  • 25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಕಾರುಣ್ಯಾ ರಾಮ್‌ ದೂರು
    25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಕಾರುಣ್ಯಾ ರಾಮ್‌ ದೂರು
  • ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಬೋಳಂತೂರು ಗ್ರಾಮದ ನೂತನ ಹಿಂದೂ ರುದ್ರಭೂಮಿ ಯಲ್ಲಿ ಶ್ರಮದಾನ ಕಾರ್ಯಕ್ರಮ
    ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ವತಿಯಿಂದ ಬೋಳಂತೂರು ಗ್ರಾಮದ ನೂತನ ಹಿಂದೂ ರುದ್ರಭೂಮಿ ಯಲ್ಲಿ ಶ್ರಮದಾನ ಕಾರ್ಯಕ್ರಮ
  • ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ
    ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ
  • ದಕ್ಷಿಣ–ಪೂರ್ವ ವಲಯ ಅಂತರ್ ವಿಶ್ವವಿದ್ಯಾಲಯ ಫುಟ್ಬಾಲ್ ಚಾಂಪಿಯನ್‌ಶಿಪ್ 2025–26: ಯೆನೆಪೋಯಾ ವಿಶ್ವವಿದ್ಯಾಲಯ ಚಾಂಪಿಯನ್
    ದಕ್ಷಿಣ–ಪೂರ್ವ ವಲಯ ಅಂತರ್ ವಿಶ್ವವಿದ್ಯಾಲಯ ಫುಟ್ಬಾಲ್ ಚಾಂಪಿಯನ್‌ಶಿಪ್ 2025–26: ಯೆನೆಪೋಯಾ ವಿಶ್ವವಿದ್ಯಾಲಯ ಚಾಂಪಿಯನ್

Designed by Elegant Themes | Powered by WordPress

error: Content is protected !!