ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿ ಮಾತನಾಡಿ ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ, ರಿಪಬ್ಲಿಕ್ ಪಾರ್ಟಿಯ ರಾಜ್ಯದ ಹಿರಿಯ ಮುಖಂಡ ಶ್ರೀ ಡಾ.ಎಂ.ವೆಂಕಟಸ್ವಾಮಿ, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ ಶ್ರೀ ಎನ್.ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ರಾಜೀವ್, ಮಾಜಿ ಶಾಸಕರಾದ ಶ್ರೀ ಸಂಪಂಗಿ, ಸಮಾಜದ ಮುಖಂಡರಾದ ಶ್ರೀ ಹರಿರಾಮ್, ಶ್ರೀ ಜಗನ್ನಾಥ್, ಶ್ರೀ ಚಿ.ನಾ.ರಾಮು, ಶ್ರೀ ಮುನಿಕೃಷ್ಣ, ಶ್ರೀ ಸತೀಶ್, ಶ್ರೀ ಪಿ.ಮೂರ್ತಿ, ಶ್ರೀ ಡಾ.ಮುನಿರಾಜು, ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.