ವಿಧಾನಸೌಧದಲ್ಲಿ ಇಂದು ಪುರುಷರ ಕಿರಿಯರ ಹಾಕಿ ಪಂದ್ಯಾವಳಿಯ ವಿಶ್ವ ಕಪ್ ಟ್ರೋಪಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅತ್ಯಂತ ಸಂತೋಷದ ಜೊತೆಗೆ ಹೆಮ್ಮೆಯಿಂದ ಅನಾವರಣಗೊಳಿಸಿದರು.
ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಪದ್ಮಶ್ರೀ ಪುರಸ್ಕೃತ ಧನಂಜಯ್ ಪಿಳ್ಳೈ, ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಡಾ.ಎ.ಬಿ.ಸುಬ್ಬಯ್ಯ, ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯದರ್ಶಿಗಳಾದ ವಿ.ಆರ್.ರಘುನಾಥ್, ಶಾಸಕರಾದ ತರೀಕೆರೆ ಶ್ರೀನಿವಾಸ್, ಹಂಪನಗೌಡ ಸೇರಿದಂತೆ ಅನೇಕ ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.