ಸಂಸತ್ತಿನ ಕಚೇರಿಯಲ್ಲಿ ಇಂದು ಕೇಂದ್ರ ಸಚಿವ ಶ್ರೀಯುತ Nitin Gadkari ಅವರನ್ನು ಭೇಟಿಯಾದ ನಮ್ಮ ನೆಚ್ಚಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.
ಬಿ.ಸಿ. ರೋಡ್ – ಸುರತ್ಕಲ್ ನಡುವಿನ ಬಂದರು ಸಂಪರ್ಕಿಸುವ ಹೆದ್ದಾರಿ ಹದಗೆಟ್ಟಿರುವುದು ಹಾಗೂ ಅದರ ಶಾಶ್ವತ ನಿರ್ವಹಣೆಗೆ ಎದುರಾಗಿರುವ ಅಡಚಣೆ, ಸಮಸ್ಯೆ – ಸವಾಲುಗಳ ಬಗ್ಗೆ ಸಚಿವರ ಗಮನಸೆಳೆದ ಸಂಸದರು.
ಈ ಪ್ರಮುಖ ರಸ್ತೆಯು ಪ್ರಸ್ತುತ NHLML ವ್ಯಾಪ್ತಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ನಿರ್ವಹಣೆಗೆ ಸೂಕ್ತವಾದ ಏಜೆನ್ಸಿ ಇಲ್ಲದ ಕಾರಣ ಹಾಗೂ ನಿಧಿಯ ಕೊರತೆಯ ಕಾರಣ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯವಗುತ್ತಿಲ್ಲ. ಇದನ್ನೂ ಓದಿ : ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನ ಮೆರಿಟೈಮ್ ವಿವಿ ಸ್ಥಾಪನೆಗೆ ಕ್ಯಾ.ಚೌಟ ಮನವಿ
ಅದರಲ್ಲೂ ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಈ ಹಿನ್ನಲೆಯಲ್ಲಿ ಬಿ.ಸಿ. ರೋಡ್ – ಸುರತ್ಕಲ್ ಹೆದ್ದಾರಿಯನ್ನು NHAI ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಕ್ಕೆ ಖುದ್ದಾಗಿ ಗಮನಹರಿಸಿ ಈ ಗಂಭೀರ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಸಚಿವರಲ್ಲಿ ಮನವಿ ಮಾಡಿದರು..
ಈ ಬಗ್ಗೆ ಸಂಸದರು ಕೂಡಾ ನಿರಂತರವಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ಕ್ರಮ ಜರುಗಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಭೇಟಿ ವೇಳೆ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಅಗತ್ಯ ಕ್ರಮದ ಭರವಸೆ ನೀಡಿದರು.
ಮಂಗಳೂರು ನಗರ ಭಾಗದ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು NH-66 ಮತ್ತು NH-75 ಅನ್ನು ಸಂಪರ್ಕಿಸುವ ರಿಂಗ್ ರೋಡ್ ನಿರ್ಮಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ಮನವಿ ಮಾಡಿದರು..