ಬಂಟ್ವಾಳ ತಾಲೂಕಿನ ನರಿಕೊಂಬು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ, ಯು.ಕೆ.ಜಿ ( ಪೂರ್ವ ಪ್ರಾರ್ಥಮಿಕ ತರಗತಿ )ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಜರಗಿತ್ತು.

ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನ ದೊಂದಿಗೆ ಸ್ವಾಗತಿಸಿ ಉಡುಗೊರೆ ನೀಡಿ ಶಾಲೆಗೆ ಬರ ಮಾಡಿಕೊಳ್ಳಲಾಯಿತು. ವಿಶೇಷ ಆಕರ್ಷಣೆಯಾಗಿ ಸೆಲ್ಫಿ ಕಾರ್ನರ್ ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಪೋಷಕರೊಂದಿಗೆ ಸೆಲ್ಫಿ ಫೋಟೋವನ್ನು ತೆಗೆಯುವ ಮೂಲಕ ತಮ್ಮ ಶಾಲಾ ಪ್ರವೇಶದ ಮೊದಲ ದಿನದಲ್ಲಿ ಆನಂದಿಸಿದರು.

ನಂತರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು. ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಉಶಾಲಾಕ್ಷಿ, ಬ್ಯಾಂಕ್ ಅಧಿಕಾರಿ ಶ್ರೀಚಂದ್ರಶೇಖರ್ ರಾವ್, ಶಾಲಾ ಅಭಿವೃದ್ಧಿ ಸಮಿತಿ ಸರ್ವ ಸದಸ್ಯರು, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿಕ್ಷಕಿ ದಿವ್ಯಾಶ್ರೀ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ಎಂ. ಪ್ರಸ್ತಾವಿಕ ಮಾತನಾಡಿದರು. ಸುನೀತ ವಂದಿಸಿ, ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು.