ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ(ಕಾವೇರಿ)  ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ 6:30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಭವ್ಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. https://bantwalaisirinews.com ಬಣ್ಣ ಬಣ್ಣದ ಚಿಟ್ಟೆಯ ನೊಡೋಣ ಬನ್ನಿ ……….

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಘನ ಉಪಸ್ಥಿತಿ ವಹಿಸಿದ್ದಲಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೌರವ ಆಹ್ವಾನಿತರಾಗಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಅವರನ್ನ ಆಹ್ವಾನಿಸಲಾಗಿದೆ.

ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತರಾಮನ್ ಅವರಿನ್ನೂ ಆಹ್ವಾನಿಸಿದೆ. ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ ಕೂಡಾ ಭಾಗಿಯಾಗಲಿದ್ದಾರೆ.

ಈ ಕಟ್ಟಡದಲ್ಲಿ ಒಟ್ಟು 52 ಕೊಠಡಿಗಳಿದ್ದು, ಅದರಲ್ಲಿ 2 ವಿವಿಐಪಿ ಸೂಟ್‌ಗಳು, 32 ಸೂಟ್ ರೂಂಗಳು ಮತ್ತು 18 ಸಿಂಗಲ್ ರೂಂಗಳು ಸೇರಿವೆ. ಇದರ ಜೊತೆಗೆ 86 ಶೌಚಾಲಯಗಳು ಮತ್ತು ಬೇಸ್‌ಮೆಂಟ್‌ನಲ್ಲಿ 10 ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಯೋಜನೆಯು 2018ರಲ್ಲಿ ಆರಂಭವಾಗಿದ್ದು, ಇದಕ್ಕಾಗಿ 81.00 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ ಕಾಮಗಾರಿ ಅಂತ್ಯದ ವೇಳೆಗೆ ಯೋಜನೆಯ ವೆಚ್ಚ 138 ಕೋಟಿ ರೂ. ತಲುಪಿದೆ.

ಕಟ್ಟಡದ ಒಟ್ಟು 10 ಮಹಡಿಗಳಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ

ಕರ್ನಾಟಕ ಭವನ (ಕಾವೇರಿ) ದೆಹಲಿಗೆ ಭೇಟಿ ನೀಡುವ ಕರ್ನಾಟಕದ ಸರ್ಕಾರಿ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರಿಗೆ ಆರಾಮದಾಯಕ ಆತಿಥ್ಯ ಸೌಲಭ್ಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಭವನವು ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಆತಿಥ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದೆ. ಇದರ ಜೊತೆಗೆ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳು, ಸಭೆ-ಸಮಾರಂಭಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.