ವಿಧಾನಸೌಧದಲ್ಲಿ ಸೆ.19ರಂದು  ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ   ಗೃಹ ಸಚಿವ ಡಾ| ಜಿ.ಪರಮೇಶ್ವರ್‌ ಅವರು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ  ನಡೆಸಿದರು.
ಕಾನೂನು ಸುವ್ಯವಸ್ಥೆ, ಪೊಲೀಸ್ ಕಾನ್‌ಸ್ಟೇಬಲ್‌‌ಗಳ ಮತ್ತು ಕಾರಾಗೃಹ ಸಿಬ್ಬಂದಿಗಳ ನೇಮಕಾತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ, ಡಿಸಿಆರ್‌ಇ ಪೊಲೀಸ್ ಠಾಣೆಗಳ ಕಾರ್ಯವೈಖರಿ ಸೇರಿದಂತೆ ಮುಂತಾದವುಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದೆ. ಕೆಲವು ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಇದನ್ನೂ ಓದಿ  : ನಾಳೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ – ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಜಿ ಕೆ.ರಾಮಚಂದ್ರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ, ಉಮೇಶ್ ಕುಮಾರ್, ಹರಿಶೇಖರನ್, ಸೌಮೇಂದು ಮುಖರ್ಜಿ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ ಹಾಗೂ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಹಾಜರಿದ್ದರು.