ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಿಂಕ್ಡ್ ಇನ್ ಪೋಸ್ಟ್ ನಲ್ಲಿ ಬರೆದ ಲೇಖನದಲ್ಲಿ ನೈಸರ್ಗಿಕ ಕೃಷಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. “ಎರಡು ವಾರಗಳ ಹಿಂದೆ, ಕೊಯಂಬತ್ತೂರಿನಲ್ಲಿ ನಡೆದ ನೈಸರ್ಗಿಕ ಕೃಷಿಯ ಕುರಿತಾದ ಶೃಂಗಸಭೆಯಲ್ಲಿ ನಾನು ಭಾಗವಹಿಸಿದ್ದೆ, ಅದು ನನ್ನ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರಿತು. ಈ ಲಿಂಕ್ಡ್ ಇನ್ ಪೋಸ್ಟ್ ನಲ್ಲಿ ಭಾರತದಾದ್ಯಂತ ಜನರು ನೈಸರ್ಗಿಕ ಕೃಷಿಯನ್ನು ಹೆಚ್ಚಿಸುವಂತೆ ಸ್ಪಷ್ಟವಾದ ಕರೆಯೊಂದಿಗೆ ಅದರ ಕುರಿತು ಕೆಲವು ಆಲೋಚನೆಗಳನ್ನು ವ್ಯಕ್ತಪಡಿಸಿದ್ದೇನೆ. ಒಮ್ಮೆ ಓದಿ ನೋಡಿ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.  ಇದನ್ನೂ ಓದಿ : ವೀರಕಂಭ ಗ್ರಾಮದ ಎರ್ಮೆಮಜಲು ಕೆಪುಳಕೋಡಿ ರಸ್ತೆ ಕಾಂಕ್ರೀಟ್ ಕರಣಕ್ಕೆ ಚಾಲನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಎರಡು ವಾರಗಳ ಹಿಂದೆ, ಕೊಯಂಬತ್ತೂರಿನಲ್ಲಿ ನಡೆದ ನೈಸರ್ಗಿಕ ಕೃಷಿಯ ಕುರಿತಾದ ಶೃಂಗಸಭೆಯಲ್ಲಿ ನಾನು ಭಾಗವಹಿಸಿದ್ದೆ, ಅದು ನನ್ನ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರಿತು. ಈ ಲಿಂಕ್ಡ್ ಇನ್ ಪೋಸ್ಟ್ ನಲ್ಲಿ ಅದರ ಕುರಿತು ಕೆಲವು ಆಲೋಚನೆಗಳನ್ನು ವ್ಯಕ್ತಪಡಿಸಿದ್ದೇನೆ, ಭಾರತದಾದ್ಯಂತ ಜನರು ನೈಸರ್ಗಿಕ ಕೃಷಿಯ ಆಸಕ್ತಿಯನ್ನು ಹೆಚ್ಚಿಸುವಂತೆ ಸ್ಪಷ್ಟವಾದ ಕರೆಯೊಂದಿಗೆ ನನ್ನ ಅಭಿಪ್ರಾಯ ಹೇಳಿದ್ದೇನೆ. ಒಮ್ಮೆ ಓದಿ ನೋಡಿ.”