ಬಂಟ್ವಾಳ: ಜನರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದನ್ನೂ ಓದಿ:ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಸತಿ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಅಹವಾಲುಗಳನ್ನು ಆಲಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
