– ಆರೋಗ್ಯ ಸೌಧದಲ್ಲಿ ಸಚಿವ ಯು.ಟಿ ಖಾದರ್ ನೇತೃತ್ವದಲ್ಲಿ ಸಂವಾದ
– ʻಋತುತಾರೆ/ಋತುಬಂಧʼ ಮಹಿಳಾ ಆರೋಗ್ಯ ನೀತಿ ರೂಪಿಸಲು ಸರ್ಕಾರ ಚಿಂತನೆ  ಇದನ್ನೂ ಓದಿ:ಬಣ್ಣ ಬಣ್ಣದ ಚಿಟ್ಟೆಯ ನೊಡೋಣ ಬನ್ನಿ ……….

ಬೆಂಗಳೂರು: ಇತ್ತೀಚೆಗೆ ಮಹಿಳೆಯರಲ್ಲಿ (Womens) ಹೆಚ್ಚುತ್ತಿರುವ ಮೆನೋಪಾಸ್ (ಋತುಬಂಧ ಅಥವಾ ಮುಟ್ಟು ನಿಲ್ಲುವಿಕೆ) ಸಂಬಂಧಿತ ಆರೋಗ್ಯ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ವೈದ್ಯಕೀಯ ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸಮಗ್ರ ಚರ್ಚೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್ (UT Khader), ಮಹಿಳೆಯರ ಆರೋಗ್ಯಕ್ಕೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಮಹಿಳಾ ಆರೋಗ್ಯಕ್ಕೆ (Women Health) ಸಂಬಂಧಿಸಿದ 6 ವಿಶೇಷ ಯೋಜನೆಗಳನ್ನ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.

ಮಹಿಳೆಯರಿಗಾಗಿ ವಿಶೇಷ ಆರೋಗ್ಯ ನೀತಿ ರೂಪಿಸಲಾಗುತ್ತಿದ್ದು, ʻಋತುತಾರೆʼ ಅಥವಾ ʻಋತುಬಂಧʼ ಎಂಬ ಹೆಸರಿನ ಪಾಲಿಸಿಯನ್ನ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ತರಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ನೀತಿಯಡಿ ಮಹಿಳೆಯರ ಜೀವನಶೈಲಿ, ಆಹಾರ ಪದ್ಧತಿ, ನಿದ್ರೆ ಸೇರಿದಂತೆ ವಿವಿಧ ಆರೋಗ್ಯ ಅಂಶಗಳ ಕುರಿತು ತಜ್ಞ ವೈದ್ಯರ ಮಾರ್ಗದರ್ಶನ ನೀಡಲಾಗುವುದು ಎಂದು ಮಾಹಿತಿ ನೀಡಿದರು.