ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Posted by Bantwala Isiri News | Mar 18, 2026 | ಬಂಟ್ವಾಳ | 0 |

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

ಇರಾನ್‌ನ ಕರಾವಳಿಯುದ್ದಕ್ಕೂ ಗುರಿಯಾಗಿಸಿ ಯುಎಸ್ ದಾಳಿ

ಟೆಹ್ರಾನ್: ಇರಾನ್‌-ಇಸ್ರೇಲ್‌, ಅಮೆರಿಕ ಯುದ್ಧ 19ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್‌ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ತಿಳಿಸಿದೆ. ಇದನ್ನೂ ಓದಿ : ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ – ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

ಹಾರ್ಮುಜ್‌ ಜಲಸಂಧಿ ಬಳಿಯ ಇರಾನ್‌ನ ಕರಾವಳಿಯುದ್ದಕ್ಕೂ ಇದ್ದ ಕ್ಷಿಪಣಿ ತಾಣಗಳ ಮೇಲೆ ಅಮೆರಿಕ 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ ಸುರಿಸಿದೆ. ನಿರ್ಣಾಯಕ ಜಲಮಾರ್ಗವನ್ನು ಮತ್ತೆ ತೆರೆಯುವ ಉದ್ದೇಶದಿಂದ ಅಮೆರಿಕ ಶಸ್ತ್ರಗಾರದಲ್ಲಿರುವ ಕೆಲವು ಶಕ್ತಿಶಾಲಿ ಬಾಂಬ್‌ಗಳ ದಾಳಿ ನಡೆಸಿದೆ.

ಈ ತಾಣಗಳಲ್ಲಿರುವ ಇರಾನಿನ ಹಡಗು ವಿರೋಧಿ ಕ್ರೂಸ್ ಕ್ಷಿಪಣಿಗಳು ಜಲಸಂಧಿಯಲ್ಲಿ ಅಂತರರಾಷ್ಟ್ರೀಯ ಹಡಗು ಸಾಗಣೆಗೆ ಅಪಾಯವನ್ನುಂಟುಮಾಡಿದವು. ಹೀಗಾಗಿ, ಅವುಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಯುದ್ಧಕ್ಕೆ ಪ್ರತೀಕಾರವಾಗಿ, ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿತ್ತು. ಇದರಿಂದ ಹಲವು ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಶುರುವಾಯಿತು. ಪ್ರಮುಖ ಮಾರ್ಗವನ್ನು ಓಪನ್‌ ಮಾಡುವುದಕ್ಕಾಗಿ ಈ ಬಾಂಬ್ ದಾಳಿ ನಡೆದಿದೆ.

ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು, ಈ ಪ್ರದೇಶದ ತೈಲ ರಫ್ತಿನ ಮೇಲಿರುವ ದಿಗ್ಬಂಧನ ಸಡಿಲಿಸಲು ಸಹಾಯ ಮಾಡುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದರು. ಆದರೆ, ನ್ಯಾಟೋ ಸೇರಿದಂತೆ ಅಮೆರಿಕದ ಮಿತ್ರರಾಷ್ಟ್ರಗಳು ಈ ಕರೆಯನ್ನು ತಿರಸ್ಕರಿಸಿದ್ದವು. ಜಗತ್ತು ನಮ್ಮ ಪ್ರಯತ್ನಗಳನ್ನು ಮೆಚ್ಚದಿದ್ದರೂ ಸಹ, ನಾವು ವಿಶ್ವದ ಒಳಿತಿಗಾಗಿ ಯುದ್ಧವನ್ನು ನಡೆಸುತ್ತಿದ್ದೇನೆ ಎಂದು ಟ್ರಂಪ್ ಒತ್ತಿ ಹೇಳಿದರು. ಆ ಬೆನ್ನಲ್ಲೇ ಅಮೆರಿಕ ದಾಳಿ ಮಾಡಿದೆ.

Share:

Rate:

Previousಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ – ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್
Nextತುಮಕೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಬಾಸ್ಕೆಟ್ ಬಾಲ್ ಅಂಕಣದ ಉದ್ಘಾಟನೆ

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಬೆಳಂದೂರು ವಿಕಸಿತ ಭಾರತ ಸಂಕಲ್ಪ ಯಾತ್ರಾ

ಬೆಳಂದೂರು ವಿಕಸಿತ ಭಾರತ ಸಂಕಲ್ಪ ಯಾತ್ರಾ

18 January 2024

ಉಡುಪಿಯು ಧರ್ಮ, ಸಹಾನುಭೂತಿ ಮತ್ತು ಸಾಮಾಜಿಕ ಉನ್ನತಿಯಲ್ಲಿ ಆಳವಾಗಿ ಬೇರೂರಿರುವ ಸ್ಥಳ -ಪ್ರದಾನ ಮಂತ್ರಿ ನರೇಂದ್ರ ಮೋದಿ

ಉಡುಪಿಯು ಧರ್ಮ, ಸಹಾನುಭೂತಿ ಮತ್ತು ಸಾಮಾಜಿಕ ಉನ್ನತಿಯಲ್ಲಿ ಆಳವಾಗಿ ಬೇರೂರಿರುವ ಸ್ಥಳ -ಪ್ರದಾನ ಮಂತ್ರಿ ನರೇಂದ್ರ ಮೋದಿ

29 November 2025

ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

26 January 2026

ಆಶ್ರಯ ಕುಟೀರ ಹಸ್ತಾಂತರ

ಆಶ್ರಯ ಕುಟೀರ ಹಸ್ತಾಂತರ

1 March 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
    ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ – 13 ಮಂದಿ ಸಾವು, 18 ಮಂದಿಗೆ ಗಾಯ
  • ಭಾರೀ ಮಳೆಗೆ  ಮನೆ ಛಾವಣಿ ಕುಸಿತ :  ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
    ಸಜೀಪಮೂಡ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ಅಗ್ನಿ ಅವಘಡ ಮನೆಗೆ ಹಾನಿ – ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ
  • ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
    ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ಪ್ರಕಾಶ್ ಅಂಚನ್ ಆಕ್ಷೇಪ
  • PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
    PM-RAHAT ಯೋಜನೆಯಡಿ ಅಪಘಾತಕ್ಕೊಳಗಾದವರನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕ್ಯಾಪ್ಟನ್ ಚೌಟ ಸೂಚನೆ.
  • ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
    ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕರೆ
  • ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
    ಜನರ ಸಮಸ್ಯೆಗಳಿಗೆ ಸ್ಪಂದನೆ: ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ – ರಾಜೇಶ್ ನಾಯ್ಕ್
  • ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
    ಮಳೆಗಾಗಿ ಕತ್ತೆಗಳಿಗೆ ಅದ್ದೂರಿ ಮದುವೆ – ಸಾವಿರಾರು ಮಂದಿಗೆ ಭರ್ಜರಿ ಭೋಜನ!
  • ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
    ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ದುರಂತ : ಯುಕೆಜಿ ಬಾಲಕಿ ಮೃತ್ಯು, ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ
  • ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ
    ತೆಂಗು ಮತ್ತು ಅಡಿಕೆ ಬೆಳೆಯ ಸಮಗ್ರ ರೋಗ ನಿರ್ವಹಣೆ ಮಾಹಿತಿ ಕಾರ್ಯಕ್ರಮ

Designed by Elegant Themes | Powered by WordPress

error: Content is protected !!