ಬಂಟ್ವಾಳ ಐಸಿರಿ ನ್ಯೂಸ್
  • ಸುದ್ದಿ
  • ಬಂಟ್ವಾಳ
  • ರಾಷ್ಟ್ರೀಯ
  • ರಾಜ್ಯ
  • ಜಿಲ್ಲೆ

Select Page

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Posted by Bantwala Isiri News | Jul 19, 2025 | ಬಂಟ್ವಾಳ | 0 |

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

ಲಕ್ನೋ: ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಮಥುರಾದ (Mathura) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ.

ಮೃತರನ್ನು ಹರ್ಲಾಲ್‌ಪುರ ಗ್ರಾಮದ ನಿವಾಸಿ ಧರ್ಮವೀರ್ ಸಿಂಗ್, ಅವರ ಮಕ್ಕಳಾದ ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ ಪರಾಸ್ ಸಿಂಗ್ ತೋಮರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ : ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ

ಇಂದು (ಶನಿವಾರ) ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಇಕೋ ಕಾರಲ್ಲಿ ಧರ್ಮವೀರ್ ಸಿಂಗ್ ದೆಹಲಿಯಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದೆಹಲಿಯಿಂದ (Dehli) ಮಧ್ಯಪ್ರದೇಶಕ್ಕೆ (Madhya Pradesh) ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 8 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಒಂದೇ ಗಂಟೆಯೊಳಗೆ ಎರಡು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

Share:

Rate:

Previousಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮ
Nextಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

About The Author

Bantwala Isiri News

Bantwala Isiri News

News Bantwala Isiri News was established on 01 Oct 2023. With a decade of experience in Journalism field, we are providing daily news updates to our readers. News from political corridors, daily events, sports, business, science, technology is published on the website. With an aim to support readers from Karnataka we are providing information about job vacancies in different companies and government departments. WRITE IN BANTWALA ISIRI NEWS Do you have the skill of writing articles, stories, poems, arts? Then we will give an opportunity to publish your writings in Bantwala Isiri News. Send your writings to bantwalaisirinews@gmail.com CONTACT US FOR ADVERTISEMENT Mail us your advertisement, address and phone number to bantwalaisirinews@gmail.com

Related Posts

ಆಹಾರ ಶಾಖೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದಿಢೀರ್ ಭೇಟಿ

ಆಹಾರ ಶಾಖೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದಿಢೀರ್ ಭೇಟಿ

31 December 2024

ರೂ. 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರ ಹಸ್ತಾಂತರ

ರೂ. 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರ ಹಸ್ತಾಂತರ

24 March 2025

ವಿಶ್ವದ ಅತ್ಯಂತ ವಿಸ್ಮಯಕಾರಿ, ಶ್ರೇಷ್ಠ ಪ್ರತಿಮೆಗಳು ಮತ್ತು ಶಿಲ್ಪಗಳು

ವಿಶ್ವದ ಅತ್ಯಂತ ವಿಸ್ಮಯಕಾರಿ, ಶ್ರೇಷ್ಠ ಪ್ರತಿಮೆಗಳು ಮತ್ತು ಶಿಲ್ಪಗಳು

26 April 2025

ಅಯೋಧ್ಯೆ ತಲುಪಿದ ಅಯೋಧ್ಯಾ ಬಾಲರಾಮನಿಗೆ ರಘುಪತಿ ಭಟ್ ಕೊಡುಗೆಯಾಗಿ ನೀಡಿದ ಕಾಷ್ಠ ಶಿಲ್ಪದ ತೊಟ್ಟಿಲು

ಅಯೋಧ್ಯೆ ತಲುಪಿದ ಅಯೋಧ್ಯಾ ಬಾಲರಾಮನಿಗೆ ರಘುಪತಿ ಭಟ್ ಕೊಡುಗೆಯಾಗಿ ನೀಡಿದ ಕಾಷ್ಠ ಶಿಲ್ಪದ ತೊಟ್ಟಿಲು

7 February 2024

Leave a reply Cancel reply

Your email address will not be published. Required fields are marked *

ಇತ್ತೀಚಿನ ವರದಿಗಳು

  • ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ – ಜನಾರ್ಧನ ಪೂಜಾರಿ
    ಕೃಷಿ ಗದ್ದೆಗಳು ಕಣ್ಮರೆಯಾಗಿ ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ – ಜನಾರ್ಧನ ಪೂಜಾರಿ
  • ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ – ಸಿ.ಎಂ. ಚಾಲನೆ
    ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ – ಸಿ.ಎಂ. ಚಾಲನೆ
  • ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ
    ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮಮ್ಮಿ – ನಿಮಿಷಾ ಪ್ರಿಯಾ ಬಿಡುಗಡೆಗೆ ಮನವಿ ಮಾಡಲು ಯೆಮನ್‍ಗೆ ಬಂದ ಪುತ್ರಿ
  • ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
    ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
  • ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅಧಿಕಾರ ಸ್ವೀಕಾರ
    ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅಧಿಕಾರ ಸ್ವೀಕಾರ
  • Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
    Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
  • ಬ್ಯಾಂಕಾಕ್ ಫುಡ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿಗೆ 6 ಬಲಿ
    ಬ್ಯಾಂಕಾಕ್ ಫುಡ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿಗೆ 6 ಬಲಿ
  • ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ
    ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊಲೆಗೈದ ಅಕ್ಕ
  • ಪಚ್ಚಿನಡ್ಕ : ಆಟಿದ ಕೂಟ
    ಪಚ್ಚಿನಡ್ಕ : ಆಟಿದ ಕೂಟ
  • ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ
    ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

Designed by Elegant Themes | Powered by WordPress

error: Content is protected !!